ದೊಡ್ಡಬಳ್ಳಾಪುರ: ಆರು ವರ್ಷಗಳಿಂದ ನಿಷ್ಕ್ರಿಯವಾಗಿರುವ ನಗರದ ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಸಮಿತಿಯ ವೈಖರಿ ವಿರೋಧಿಸಿ ಫೆ.13ರಂದು ಅಣಕು ಶವಯಾತ್ರೆ ನಡೆಯಲಿದೆ ಎಂದು ಕರವೇ (ನಾರಾಯಣಗೌಡ ಬಣ) ತಾಲ್ಲೂಕು ಮುಖಂಡ ಡಿ.ಎನ್.ಮಂಜುನಾಥ್ ತಿಳಿಸಿದ್ದಾರೆ.
ಶಾಸಕರೇ ಅಧ್ಯಕ್ಷರಾಗಿರುವ ಆಸ್ಪತ್ರೆ ಅಭಿವೃದ್ಧಿ ಸಮಿತಿ 6 ವರ್ಷಗಳಿಂದ ಸಭೆ ನಡೆಸಿಲ್ಲ. ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ. ರೋಗಿಗಳಿಗೆ ಸೂಕ್ತ ಸೌಲಭ್ಯ ದೊರೆಯದೇ ಪರದಾಡುವಂತಾಗಿದೆ. ಇದನ್ನು ಖಂಡಿಸಿ ಸೋಮವಾರ ಅಣಕು ಶವ ಯಾತ್ರೆ ನಡೆಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.