ADVERTISEMENT

ಇಂದು ಚನ್ನಗಿರಿಗೆ ನಿತೀಶ್‌ ಕುಮಾರ್‌

​ಪ್ರಜಾವಾಣಿ ವಾರ್ತೆ
Published 5 ಮೇ 2018, 19:46 IST
Last Updated 5 ಮೇ 2018, 19:46 IST

ಬೆಂಗಳೂರು: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರು ಜೆಡಿಯು ಪಕ್ಷದ ಅಭ್ಯರ್ಥಿ ಮಹಿಮ ಪಟೇಲ್‌ ಪರ ಚನ್ನಗಿರಿಯಲ್ಲಿ ಭಾನುವಾರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಈ ಕುರಿತು ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಜೆಡಿಯು ರಾಜ್ಯ ಯುವ ಘಟಕದ ಅಧ್ಯಕ್ಷ ಕೆ.ವಿ ಶಿವರಾಂ, ‘ಬೆಂಗಳೂರಿಗೆ ವಿಮಾ
ನದಲ್ಲಿ ಬರುವ ಅವರು ಇಲ್ಲಿಂದ  ತುಮಕೂರಿಗೆ ತೆರಳಿ ಶಿವಕುಮಾರಸ್ವಾಮಿ ಅವರ ದರ್ಶನ ಪಡೆಯಲಿದ್ದಾರೆ. ನಂತರ ನೇರವಾಗಿ ಚನ್ನಗಿರಿ ತಲುಪಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT