ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಮಂಗಳವಾರ ಬೆಳಿಗ್ಗೆ ದೆಹಲಿಗೆ ತೆರಳುವರು. ಖಾಸಗಿ ಕಾರ್ಯಕ್ರಮ ನಿಮಿತ್ತ ದೆಹಲಿಗೆ ತೆರಳುವ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರ ಜತೆಗೆ ಮಾತುಕತೆ ನಡೆಸಲಿದ್ದಾರೆ. ಅವಕಾಶ ಸಿಕ್ಕರೆ ಪಕ್ಷದ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರನ್ನೂ ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿಎಂ ಸಭೆ: ವಿಧಾನಸಭೆಯಲ್ಲಿ ಬರ ಕುರಿತು ನಡೆದಿರುವ ಚರ್ಚೆಗೆ ಉತ್ತರ ಸಿದ್ಧಪಡಿಸುವ ಸಂಬಂಧ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಸೋಮವಾರ ತಡರಾತ್ರಿವರೆಗೂ ಅಧಿಕಾರಿಗಳ ಸಭೆ ನಡೆಸಿದರು. ಯಡಿಯೂರಪ್ಪ ಅವರು ಬರ ಹಿನ್ನೆಲೆಯಲ್ಲಿ ನೀಡಿರುವ ಸಲಹೆಗಳ ಅನುಷ್ಠಾನ ಸಾಧ್ಯಾಸಾಧ್ಯತೆ ಕುರಿತು ಚರ್ಚಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.