ಬೆಂಗಳೂರು: ಲೋಕಸಭಾ ಚುನಾವಣಾ ತಯಾರಿ, ಪಕ್ಷ ಸಂಘಟನೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಲು ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಸೋಮವಾರ ನಡೆಯಲಿದೆ.
ನಗರದ ಖಾಸಗಿ ಹೋಟೆಲ್ನಲ್ಲಿ ಮಧ್ಯಾಹ್ನ 2ಕ್ಕೆ ಗಂಟೆಗೆ ಆರಂಭವಾಗುವ ಕಾರ್ಯಕಾರಿಣಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪಾಲ್ಗೊಳ್ಳುವರು.
ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರೂ ಆಗಿರುವ ಶಾಸಕ ಎಸ್.ಟಿ.ಸೋಮಶೇಖರ್ ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರು, ಜಿಲ್ಲಾ ಪಂಚಾಯಿತಿ ಸದಸ್ಯರು ಸಭೆಯಲ್ಲಿ ಭಾಗವಹಿಸುವರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.