ADVERTISEMENT

ಇಂದು ರಾತ್ರಿ 12ಕ್ಕೆ ಕರಗ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2018, 20:29 IST
Last Updated 30 ಮಾರ್ಚ್ 2018, 20:29 IST

ಬೆಂಗಳೂರು: ನಗರ ನಿವಾಸಿಗಳು ಕಾತರದಿಂದ ಕಾಯುತ್ತಿರುವ ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯುತ್ಸವ ಶನಿವಾರ ರಾತ್ರಿ 12ಕ್ಕೆ ನಡೆಯಲಿದೆ.

ಕರಗ ಸಾಗುವ ಹಲಸೂರುಪೇಟೆ, ನಗರ್ತಪೇಟೆ, ಸಿದ್ದಣ್ಣಲ್ಲಿ, ಕಬ್ಬನ್‌ಪೇಟೆ, ಅರಳೆಪೇಟೆ, ಗಾಣಿಗರಪೇಟೆ, ಅಕ್ಕಿಪೇಟೆ, ಅರಳೆಪೇಟೆ, ಕುಂಬಾರ
ಪೇಟೆ, ಗೊಲ್ಲರಪೇಟೆ, ತಿಗಳರಪೇಟೆ ಮಾರ್ಗಗಳಲ್ಲಿ ವಿದ್ಯುತ್‌ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಕರಗ ತಲುಪುವ ಎಲ್ಲ ದೇವಸ್ಥಾನಗಳನ್ನು ಆಕರ್ಷಕವಾಗಿ ಸಿಂಗರಿಸಲಾಗಿದೆ.

250ಕ್ಕೂ ಅಧಿಕ ವರ್ಷಗಳ ಇತಿಹಾಸವುಳ್ಳ ಈ ಉತ್ಸವದಲ್ಲಿ ತಿಗಳ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ.

ADVERTISEMENT

ಮಾರ್ಗ ಬದಲಾವಣೆ: ತಿಗಳರಪೇಟೆಯ ಕರಗ ಶಕ್ತ್ಯುತ್ಸವ ಪ್ರಯುಕ್ತ ಶನಿವಾರ ರಾತ್ರಿ 12ರಿಂದ ಭಾನುವಾರ (ಏ.1) ಬೆಳಿಗ್ಗೆ 6 ಗಂಟೆ
ಯವರೆಗೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಸಿಟಿ ಮಾರುಕಟ್ಟೆ ವೃತ್ತದಿಂದ (ಅವೆನ್ಯೂ ರಸ್ತೆ) ಮೈಸೂರು ಬ್ಯಾಂಕ್ ವೃತ್ತದವರೆಗೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಇಲ್ಲಿ ಸಂಚರಿಸಬೇಕಿದ್ದ ವಾಹನಗಳು, ಎಸ್.ಜೆ.ಪಿ ರಸ್ತೆ, ಟೌನ್ ಹಾಲ್, ಕೆಂಪೇಗೌಡ ರಸ್ತೆ ಮೂಲಕ ಹೋಗಬಹುದು. ಮೈಸೂರು ರಸ್ತೆ ಕಡೆಯಿಂದ ಬರುವ ವಾಹನಗಳು, ಬ್ರಿಯಾಂಡ್ ವೃತ್ತ, ರಾಯನ್ ವೃತ್ತದ ಮೂಲಕ ಜೆ.ಸಿ.ರಸ್ತೆ ಪ್ರವೇಶಿಸಿಸಬಹುದು. ಕಾಟನ್‌ಪೇಟೆ ಮುಖ್ಯರಸ್ತೆಯಲ್ಲಿ ಸಂಚರಿಸುವ ವಾಹನಗಳು, ದೇವರಾಜ ಅರಸು ವೃತ್ತ , ವಾಟಾಳ್ ನಾಗರಾಜ ರಸ್ತೆ, ಬಿನ್ನಿಮಿಲ್ ರಸ್ತೆ ಮೂಲಕ ಮೈಸೂರು ರಸ್ತೆ ಸೇರಬಹುದು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಪಾರ್ಕಿಂಗ್ ವ್ಯವಸ್ಥೆ: ಕರಗ ಉತ್ಸವ ವೀಕ್ಷಿಸಲು ಬರುವ ಸಾರ್ವಜನಿಕರು, ಜೆ.ಸಿ.ರಸ್ತೆಯ  ಮಹಾನಗರ ಪಾಲಿಕೆಯ ಪಾರ್ಕಿಂಗ್ ಜಾಗದಲ್ಲಿ ವಾಹನಗಳನ್ನು ನಿಲ್ಲಿಸಬಹುದು. ಕೆ.ಜಿ.ರಸ್ತೆಯ ಕೆಂಪೇಗೌಡ ಮಹಾರಾಜ ಪಾರ್ಕಿಂಗ್ ಕಾಂಪ್ಲೆಕ್ಸ್, ಮಾಮೂಲ್ ಪೇಟೆ ಮುಖ್ಯರಸ್ತೆಯ ಕೆಂಪೇಗೌಡ ಪಾರ್ಕಿಂಗ್ ಕಾಂಪ್ಲೆಕ್ಸ್, ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.