ADVERTISEMENT

ಇ-ಆಡಳಿತ: ನಿವಾಸಿ ಮಾಹಿತಿ ಕೇಂದ್ರ ಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2012, 19:30 IST
Last Updated 21 ಮಾರ್ಚ್ 2012, 19:30 IST

ಬೆಂಗಳೂರು: ಜನ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸಲು `ರಾಜ್ಯ ನಿವಾಸಿ ಮಾಹಿತಿ ಕೇಂದ್ರ~ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ರಾಜ್ಯದ ನಿವಾಸಿಗಳಿಗೆ ಒದಗಿಸಲಾಗುವ ವಿವಿಧ ಸೌಲಭ್ಯಗಳ ಕುರಿತು ವಿವರ ನೀಡುವ ಈ ಕೇಂದ್ರ 9 ತಿಂಗಳಲ್ಲಿ ಆರಂಭವಾಗಲಿದೆ.
 
ವಿಶಿಷ್ಟ ಗುರುತಿನ ಚೀಟಿ (ಯುಐಡಿ) ಯೋಜನೆ ಅಡಿ ಫಲಾನುಭವಿ ಕೇಂದ್ರಿತ ಕಲ್ಯಾಣ ಕಾರ್ಯಕ್ರಮಗಳನ್ನು ತುಮಕೂರು, ಮೈಸೂರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.