ADVERTISEMENT

ಉತ್ತಮ ಜೀವನ ನಿರ್ವಹಣೆಗೆ ರೇಷ್ಮೆಬೆಳೆಯಿರಿ: ಬಚ್ಚೇಗೌಡ

​ಪ್ರಜಾವಾಣಿ ವಾರ್ತೆ
Published 2 ಜನವರಿ 2013, 19:59 IST
Last Updated 2 ಜನವರಿ 2013, 19:59 IST
ಹೊಸಕೋಟೆ ತಾಲ್ಲೂಕು ಉಪ್ಪಾರಹಳ್ಳಿ ಗ್ರಾಮದಲ್ಲಿನ ಮದ್ದೂರಮ್ಮ ದೇವಿ ದನಗಳ ಜಾತ್ರೆಯಲ್ಲಿ ನಡೆದ ರಾಸುಗಳ ಸ್ಪರ್ಧೆಯಲ್ಲಿನ ವಿಜೇತ ಮಾಲೀಕರಿಗೆ ಸಚಿವ ಬಿ.ಎನ್.ಬಚ್ಚೇಗೌಡ ಬಹುಮಾನ ವಿತರಿಸಿದರು. ಜಿ.ಪಂ.ಅಧ್ಯಕ್ಷ ತಿರುವರಂಗ ನಾರಾಯಣಸ್ವಾಮಿ, ಎಪಿಎಂಸಿ ಅಧ್ಯಕ್ಷ ಸಿ.ಮುನಿಯಪ್ಪ ಮತ್ತಿತರರು ಚಿತ್ರದಲ್ಲಿದ್ದಾರೆ
ಹೊಸಕೋಟೆ ತಾಲ್ಲೂಕು ಉಪ್ಪಾರಹಳ್ಳಿ ಗ್ರಾಮದಲ್ಲಿನ ಮದ್ದೂರಮ್ಮ ದೇವಿ ದನಗಳ ಜಾತ್ರೆಯಲ್ಲಿ ನಡೆದ ರಾಸುಗಳ ಸ್ಪರ್ಧೆಯಲ್ಲಿನ ವಿಜೇತ ಮಾಲೀಕರಿಗೆ ಸಚಿವ ಬಿ.ಎನ್.ಬಚ್ಚೇಗೌಡ ಬಹುಮಾನ ವಿತರಿಸಿದರು. ಜಿ.ಪಂ.ಅಧ್ಯಕ್ಷ ತಿರುವರಂಗ ನಾರಾಯಣಸ್ವಾಮಿ, ಎಪಿಎಂಸಿ ಅಧ್ಯಕ್ಷ ಸಿ.ಮುನಿಯಪ್ಪ ಮತ್ತಿತರರು ಚಿತ್ರದಲ್ಲಿದ್ದಾರೆ   

ಹೊಸಕೋಟೆ: `ನೀರಿಲ್ಲದೆ ತೊಂದರೆಗೊಳಗಾಗಿರುವ ರೈತರು ಜೀವನ ಉತ್ತಮ ಪಡಿಸಿಕೊಳ್ಳುವಲ್ಲಿ ತಮ್ಮ ಜಮೀನಿನ ಸ್ವಲ್ಪಜಾಗದಲ್ಲಿ ಉತ್ತಮ ಬೆಲೆ ದೊರೆಯುತ್ತಿರುವ ರೇಷ್ಮೆ ಬೆಳೆ ಬೆಳೆಯವಂತಾಗಬೇಕು, ಬೆಳೆ ಬೆಳೆಯುವವರಿಗೆ ಪ್ರೋತ್ಸಾಹಿಸುವಲ್ಲಿ ಸರ್ಕಾರ ಶೇಕಡಾ 75 ರಷ್ಟು ಸಹಾಯಧನ ಸಹ ನೀಡುತ್ತಿದೆ' ಎಂದು ಸಚಿವ ಬಿ.ಎನ್.ಬಚ್ಚೇಗೌಡ ಕಿವಿಮಾತು ಹೇಳಿದರು.

ಇಲ್ಲಿಗೆ ಸಮೀಪದ ಉಪ್ಪಾರಹಳ್ಳಿ ಗ್ರಾಮದಲ್ಲಿ ನಡೆದ ಮದ್ದೂರಮ್ಮ ದೇವಿ ದನಗಳ ಜಾತ್ರೆಯಲ್ಲಿನ ಉತ್ತಮ ರಾಸುಗಳಿಗೆ ಬುಧವಾರ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಪಂಚಾಯಿತಿ ಕೇಂದ್ರವಾದ ಕುಂಬಳಹಳ್ಳಿ ಹಾಗು ಆಲಪ್ಪನಹಳ್ಳಿ ಗ್ರಾಮದ ಅಭಿವೃದ್ಧಿಗಾಗಿ ಅವುಗಳನ್ನು ಸುವರ್ಣಗ್ರಾಮ ಯೋಜನೆಗೆ ಸೇರಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ತಿರುವರಂಗ ನಾರಾಯಣಸ್ವಾಮಿ, ಸಿಇಒ ಕೃಷ್ಣಪ್ಪ ಕೋಡಿಪಾಳ್ಯ, ಎಪಿಎಂಸಿ ಅಧ್ಯಕ್ಷ ಸಿ.ಮುನಿಯಪ್ಪ, ಮುಖಂಡ ಬಿ.ಎಂ.ನಾರಾಯಣಸ್ವಾಮಿ ಅವರು ಮಾತನಾಡಿದರು.

ಉತ್ತಮ ರಾಸುಗಳಿಗೆ ಹಾಗು ಕೃಷಿ, ತೋಟಕಾರಿಕೆಯಲ್ಲಿ ಉತ್ತಮ ಬೆಳೆ ಬೆಳೆದವರಿಗೆ ಬಹುಮಾನ ವಿತರಿಸಲಾಯಿತು. ಎಪಿಎಂಸಿ ವತಿಯಿಂದ ಅತ್ಯುತ್ತಮ ರಾಸುಗಳ ಮಾಲೀಕರಿಗೆ ಪ್ರೋತ್ಸಾಹಿಸುವಲ್ಲಿ 28 ಸಾವಿರ ರೂಪಾಯಿ ನಗದು ಬಹುಮಾನ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.