ADVERTISEMENT

ಉತ್ತಮ ವಿಚಾರ ಮನವರಿಕೆ ಅಗತ್ಯ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2011, 19:30 IST
Last Updated 24 ಸೆಪ್ಟೆಂಬರ್ 2011, 19:30 IST

ಕೆಂಗೇರಿ: ಶಾಲಾ ಮಕ್ಕಳಲ್ಲಿ ಉತ್ತಮ ವಿಚಾರಗಳ ಬಗ್ಗೆ ಮನವರಿಕೆ ಮಾಡಿಕೊಡುವ ಅಗತ್ಯವಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್. ಸುರೇಶ್‌ಕುಮಾರ್ ಪ್ರತಿಪಾದಿಸಿದರು.

ಹೊರ ವರ್ತುಲ ರಸ್ತೆಯ ಡಾ.ಅಂಬೇಡ್ಕರ್ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾರಂಭದಲ್ಲಿ ಶಿಕ್ಷಣ ಸಂಸ್ಥೆಯ ವಿವಿಧ ಶಾಲಾ ಶಿಕ್ಷಕರನ್ನು ಸನ್ಮಾನಿಸಲಾಯಿತು. ಪಿವಿಪಿ ವೆಲ್‌ಫೇರ್ ಟ್ರಸ್ಟ್‌ನ ಅಧ್ಯಕ್ಷ ಪಿ.ಎಲ್.ನಂಜುಂಡಸ್ವಾಮಿ, ಟ್ರಸ್ಟ್ ಕಾರ್ಯದರ್ಶಿ ಶಿವಮಲ್ಲು, ಖಜಾಂಚಿ ಡಾ.ಮಹದೇವ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.