ಬೆಂಗಳೂರು: ಟಿ.ಜಾನ್ ತಾಂತ್ರಿಕ ಸಂಸ್ಥೆಯು ಗ್ರಿಡ್ (ಗ್ಲೋಬಲ್ ರಿಸರ್ಚ್ ಇನ್ನೋವೇಷನ್ ಅಂಡ್ ರಿಸರ್ಚ್)ನ ಸಹಯೋಗದಲ್ಲಿ ನಗರದ ಬನ್ನೇರಘಟ್ಟ ರಸ್ತೆಯಲ್ಲಿರುವ ಸಂಸ್ಥೆಯ ಆವರಣದಲ್ಲಿ ಶನಿವಾರ ಮತ್ತು ಭಾನುವಾರ ಅಂತಿಮ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ತಯಾರಿಸಿರುವ ವಿವಿಧ ಮಾದರಿಗಳ ಪ್ರದರ್ಶನ ಹಾಗೂ ಉದ್ಯೋಗ ಮೇಳ ಹಮ್ಮಿಕೊಂಡಿದೆ.
ಈ ಕುರಿತು ಸಂಸ್ಥೆಯ ಪ್ರಾಚಾರ್ಯ ಡಾ.ಎಸ್.ಪದ್ಮನಾಭ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಇರುವ ಪ್ರತಿಭೆಯನ್ನು ಬೆಳಕಿಗೆ ತರಲು ಮತ್ತು ಉದ್ಯೋಗಾವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಾನುವಾರ ಬೆಳಿಗ್ಗೆ 9ಕ್ಕೆ ಮಾಹಿತಿ ತಂತ್ರಜ್ಞಾನ ಸಚಿವ ಎಸ್.ಆರ್. ಪಾಟೀಲ ಮೇಳವನ್ನು ಉದ್ಘಾಟಿಸುವರು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.