
ಬೆಂಗಳೂರು: ಮುಂದಿನ ತಿಂಗಳು ಮಂಡಿಸಲಿರುವ ಬಜೆಟ್ನಲ್ಲಿ ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಕೇಂದ್ರ ರಸಗೊಬ್ಬರ ಸಚಿವ ಅನಂತಕುಮಾರ್ ರೈಲ್ವೆ ಸಚಿವ ಸುರೇಶ್ಪ್ರಭು ಅವರಿಗೆ ಮನವಿ ಮಾಡಿದರು.
ನವದೆಹಲಿಯ ರೈಲ್ವೆ ಭವನದಲ್ಲಿ ಸಚಿವರನ್ನು ಭೇಟಿ ಮಾಡಿದ ಅನಂತಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಪತ್ರವನ್ನೂ ಹಸ್ತಾಂತರಿಸಿದರು.
‘ಐಟಿ, ಬಿಟಿ ಉದ್ಯಮದ ಬೆಳವಣಿಗೆಯಿಂದ ಸಂಚಾರದ ಒತ್ತಡವೂ ಹೆಚ್ಚಾಗಿದೆ. ವೈಟ್ಫೀಲ್ಡ್ ಮತ್ತು ಹೊರವರ್ತುಲ ರಸ್ತೆ ಸುತ್ತಲಿನ ಪ್ರದೇಶಗಳಿಗೆ ತೆರಳಲು ಪ್ರಯಾಣದ ಅವಧಿ ಹೆಚ್ಚಿದ್ದರಿಂದ ಉತ್ಪಾದನೆಯಲ್ಲಿ ಕುಂಠಿತವಾಗಿದೆ. ಹೀಗಾಗಿ ಉಪನಗರ ರೈಲ್ವೆ ಯೋಜನೆ ಆರಂಭಿಸಬೇಕು’ ಎಂದು ಕೇಳಿಕೊಂಡರು.
ರೈಲ್ವೆ ಮಂಡಳಿ ಅಧ್ಯಕ್ಷ ಎ.ಕೆ. ಮಿತ್ತಲ್ ಹಾಗೂ ಇತರ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.