ADVERTISEMENT

ಉಪ್ಪಾರ ಜಾತಿ ಪರಿಶಿಷ್ಟ ಪಂಗಡಕ್ಕೆ: ಸಿ.ಎಂ ಭರವಸೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2014, 19:08 IST
Last Updated 2 ಮಾರ್ಚ್ 2014, 19:08 IST

ಬೆಂಗಳೂರು: ಉಪ್ಪಾರ ಜಾತಿಯನ್ನು ಪರಿಶಿಷ್ಟ ಪಂಗ­ಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸ­ಲಾ­ಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಉಪ್ಪಾರ ಸಂಘವು ಹಮ್ಮಿ­ಕೊಂಡಿದ್ದ ರಾಜ್ಯ ಮಟ್ಟದ ಉಪ್ಪಾರ ಬೃಹತ್‌ ಸಮಾ­ವೇಶ­ವನ್ನು ಉದ್ಘಾಟಿಸಿ ಮಾತನಾಡಿದರು.

ಜಾತಿ ಆಳವಾಗಿ ಬೇರು ಬಿಟ್ಟಿದ್ದು, ಹಿಂದುಳಿದ ಜಾತಿಗಳು ಹೆಚ್ಚೆಚ್ಚು ಸಮಾವೇಶಗಳನ್ನು ನಡೆಸುವ ಮೂಲಕ ಸರ್ಕಾರದ ಮೇಲೆ ಒಗ್ಗಟ್ಟಿನ ಒತ್ತಡ ತರಬೇಕು. ಆ ಮೂಲಕ ಸಮಸ್ಯೆಗಳನ್ನು ಪರಿಹರಿಸಿ­ಕೊ­ಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ರಾಜ್ಯದ ನಾನಾ ಭಾಗಗಳಲ್ಲಿ ಉಪ್ಪಾರ ಸಮು­ದಾಯ ಹಂಚಿಹೋಗಿದ್ದು, ಈವರೆಗೆ ಕೇವಲ ಇಬ್ಬರು ಮಾತ್ರ ವಿಧಾನಸಭೆ ಪ್ರವೇಶಿಸಲು ಸಾಧ್ಯವಾಗಿದೆ. ಹಿಂದುಳಿದ ವರು ಮೇಲ್ಮಟ್ಟದಲ್ಲೂ ಚುನಾಯಿತ­ರಾಗ­ಬೇಕು. ಈ ಬಗ್ಗೆ ಹೆಚ್ಚಿನ ಚರ್ಚೆ ನಡೆಯಬೇಕು ಎಂದರು.

ಪುರುಷೋತ್ತಮಾನಂದಪುರಿ ಸ್ವಾಮೀಜಿ ರಾಜ್ಯ­ದಲ್ಲಿ ಉಪ್ಪಾರರ ಸಂಖ್ಯೆ 40 ಲಕ್ಷಕ್ಕೂ ಮೀರಿದೆ. ಉಪ್ಪಾರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು, ಸಮು­ದಾಯ ಭವನ  ಹಾಗೂ ವಿದ್ಯಾರ್ಥಿ ನಿಲಯ ಸ್ಥಾಪನೆಗೆ ₨5 ಕೋಟಿ ಮಂಜೂರು ಮಾಡಬೇಕು’ ಎಂದು ಮನವಿ­ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.