ADVERTISEMENT

‘ಎಡಗೈ, ಬಲಗೈ ಸಮಾಜಕ್ಕೂ ಟಿಕೆಟ್‌ ಕೊಡಿ’

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2018, 20:02 IST
Last Updated 23 ಮಾರ್ಚ್ 2018, 20:02 IST
ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಧರಣಿ ನಡೆಸಿದರು
ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಧರಣಿ ನಡೆಸಿದರು   

ಬೆಂಗಳೂರು: ‘ಮುಂದಿನ ಚುನಾವಣೆಯಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಎಡಗೈ ಅಥವಾ ಬಲಗೈ ಸಮುದಾಯದವರಿಗೆ ಕಾಂಗ್ರೆಸ್‌ ಪಕ್ಷದಿಂದ ಟಿಕೆಟ್‌ ನೀಡಬೇಕು’ ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಕೆ.ಆರ್.ಪುರ ತಾಲ್ಲೂಕು ಕಚೇರಿ ಆವರಣದ ಅಂಬೇಡ್ಕರ್‌ ಪ್ರತಿಮೆ ಎದುರು ಧರಣಿ ನಡೆಸಿದರು.

‘ಕ್ಷೇತ್ರದಲ್ಲಿ 1.80 ಲಕ್ಷ ಮಂದಿ ದಲಿತರಿದ್ದು, ಕಾಂಗ್ರೆಸ್‌ ಪಕ್ಷವನ್ನೇ ಬೆಂಬಲಿಸಿಕೊಂಡು ಬರುತ್ತಿದ್ದಾರೆ. ಯಾವುದೇ ಕಾರಣಕ್ಕೂ ಭೋವಿ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಬಾದು. ತಪ್ಪಿದರೆ, ಚುನಾವಣೆಯನ್ನು ಬಹಿಷ್ಕರಿಸಬೇಕಾಗುತ್ತದೆ’ ಎಂದು ದಲಿತ ಮುಖಂಡ ಅಣ್ಣಯ್ಯ ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT