ADVERTISEMENT

ಎಸಿಪಿಗೆ ಮಹದೇವಯ್ಯಗೆ ದಂಡ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2018, 19:30 IST
Last Updated 10 ಮಾರ್ಚ್ 2018, 19:30 IST

ಬೆಂಗಳೂರು: ಸ್ಥಳೀಯ ನ್ಯಾಯಾಲಯದಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್‌ನಲ್ಲಿ ಮಾತನಾಡಿದ ಕಾರಣಕ್ಕೆ ಬಾಣಸವಾಡಿಯ ಎಸಿಪಿ ಮಹದೇವಯ್ಯ ಅವರಿಗೆ ₹350 ದಂಡ ವಿಧಿಸಲಾಗಿದೆ.

ಪ್ರಕರಣವೊಂದರ ವಿಚಾರಣೆಗೆ ಬಂದಿದ್ದ ಮಹದೇವಯ್ಯ, ನ್ಯಾಯಧೀಶ ಅರವಿಂದ್ ಕುಮಾರ್ ಸಮೀಪವೇ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು. ಅದನ್ನು ಗಮನಿಸಿದ ನ್ಯಾಯಾಧೀಶರು, ‘ನ್ಯಾಯಾಲಯದಲ್ಲಿ ಮೊಬೈಲ್ ಬಳಕೆ ಮಾಡಬಾರದು ಎಂಬ ವಿಚಾರ ಪೊಲೀಸ್ ಅಧಿಕಾರಿಯಾಗಿರುವ ನಿಮಗೆ ಗೊತ್ತಿಲ್ಲವೇ’ ಎಂದು ಅವರನ್ನು ತರಾಟೆಗೆ ತೆಗೆದುಕೊಂಡರು.

ಮಹದೇವಯ್ಯ ಅವರ ಎರಡು ಮೊಬೈಲ್‌ಗಳನ್ನು ವಶಕ್ಕೆ ಪಡೆಯುವಂತೆ ನ್ಯಾಯಾಧೀಶರು ಸಿಬ್ಬಂದಿಗೆ ಸೂಚಿಸಿದರು. ಬಳಿಕ ದಂಡದ ಮೊತ್ತವನ್ನು ಪಾವತಿಸಿ, ಮೊಬೈಲ್‌ಗಳನ್ನು ತೆಗೆದುಕೊಂಡು ಹೋದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.