ಬೆಂಗಳೂರು: ಪ್ರತಿಭಟನೆ, ಮುಷ್ಕರ ನಡೆಸುವ ಸರ್ಕಾರಿ ವಲಯಗಳ ಕಾರ್ಮಿಕರ ಮೇಲೆ ‘ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆಯನ್ನು (ಎಸ್ಮಾ)ಜಾರಿಗೊಳಿಸಲು ಮುಂದಾಗಿರುವ ಸರ್ಕಾರದ ಕ್ರಮಕ್ಕೆ ವಿವಿಧ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ‘ಎಸ್ಮಾ ಜಾರಿಯಾದರೆ ಪ್ರತಿಭಟನೆ ನಡೆಸುವ ನೌಕರರನ್ನು ವಾರೆಂಟ್ ಇಲ್ಲದೆ ಬಂಧಿಸಿ, ಜೈಲಿಗೆ ಕಳುಹಿಸಬಹುದಾಗಿದೆ.
ಜತೆಗೆ ₨5,000 ದಂಡ ವಿಧಿಸಲು ಅವಕಾಶವಿದೆ. ಬದುಕಿನ ಹಕ್ಕಿಗಾಗಿ ಹೋರಾಟ ಮಾಡುವ ನೌಕರರನ್ನು ಹೀಗೆ ಕಾಯ್ದೆ, ಕಾನೂನುಗಳಿಂದ ಕಟ್ಟಿ ಹಾಕುವ ಕ್ರಮ ಸರಿಯಲ್ಲ ಎಂದು ಎಐಯುಟಿಯುಸಿ ಸಂಘಟನೆ ತಿಳಿಸಿದೆ. ಬೆಳಗಾವಿ ಅಧಿವೇಶನದಲ್ಲಿ ಎಸ್ಮಾ ಕಾಯ್ದೆಯನ್ನು ಅಂಗೀಕರಿಸಿರುವ ಸರ್ಕಾರದ ಕ್ರಮವನ್ನು ರಾಜ್ಯ ಲಾರಿ ಮಾಲೀಕರು ಮತ್ತು ಏಂಜೆಂಟರ ಸಂಘ ಖಂಡಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದಮನ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.