ADVERTISEMENT

ಏ.5ರ ನಂತರ ಬಿಜೆಪಿಗೆ: ಲಖನ್‌

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2018, 19:30 IST
Last Updated 1 ಏಪ್ರಿಲ್ 2018, 19:30 IST

ಬೆಳಗಾವಿ: ಏ.5ರ ನಂತರ ತಾವು ಬೆಂಗಳೂರಿನಲ್ಲಿ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಉದ್ಯಮಿ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಸಹೋದರ ಲಖನ್‌ ಜಾರಕಿಹೊಳಿ ಭಾನುವಾರ ‘ಪ್ರಜಾವಾಣಿ’ಗೆ ತಿಳಿಸಿದರು.

‘ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಅಮಿತ್‌ ಶಾ ಅವರು ಸೋಮವಾರ (ಏ.2) ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಆ ಸಂದರ್ಭದಲ್ಲಿ ನಾನು ಬಿಜೆಪಿ ಸೇರುವುದಿಲ್ಲ. ಏ. 5ರ ನಂತರ ಸೇರ್ಪಡೆಯಾಗುತ್ತೇನೆ. ಆದರೆ, ಪಕ್ಷದ ಚಟುವಟಿಕೆಗಳನ್ನು ಯಮಕನಮರಡಿಗಷ್ಟೇ ಸೀಮಿತವಾಗಿ ಇಟ್ಟುಕೊಳ್ಳುತ್ತೇನೆ’ ಎಂದರು.

ಜಿಲ್ಲೆಗೆ ಅಮಿತ್‌ ಶಾ ಭೇಟಿ ನೀಡಿದ ಸಂದರ್ಭದಲ್ಲಿ ಲಖನ್‌ ಬಿಜೆಪಿ ಸೇರಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.