ADVERTISEMENT

‘ಒಂದು ಲಕ್ಷ ಮನೆ ನಿರ್ಮಾಣ’

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2017, 19:30 IST
Last Updated 4 ಅಕ್ಟೋಬರ್ 2017, 19:30 IST

ಬೆಂಗಳೂರು: ‘ಹೆಸರುಘಟ್ಟದಲ್ಲಿ ಒಂದು ಲಕ್ಷ ಸೂರುಗಳನ್ನು ನಿರ್ಮಿಸಿ ಬಡವರಿಗೆ ಹಂಚುತ್ತೇವೆ. ಇದಕ್ಕೆ ಸಂಬಂಧಪಟ್ಟ ಕೆಲಸಗಳು ಪ್ರಗತಿಯಲ್ಲಿವೆ’ ಎಂದು ಶಾಸಕ ವಿಶ್ವನಾಥ್ ಹೇಳಿದರು.

ಹೆಸರಘಟ್ಟದಲ್ಲಿನ ವಿಶ್ವವಾಣಿ ಪ್ರತಿಷ್ಠಾನ ಹಮ್ಮಿಕೊಂಡಿದ್ದ ‘ಹೊಲಿಗೆ ಯಂತ್ರ ವಿತರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಷ್ಠಾನದ ಅಧ್ಯಕ್ಷೆ ವಾಣಿ ವಿಶ್ವನಾಥ್, ‘ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಹೊಲಿಗೆ ಯಂತ್ರ ಗಳನ್ನು ನೀಡುತ್ತಿದ್ದೇವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.