ಬೆಂಗಳೂರು: ಚಾಲನಾ ಪರವಾನಗಿ ಇಲ್ಲದೆ, ವಿದ್ಯಾರ್ಥಿಗಳು ತರುವ ವಾಹನಗಳಿಗೆ ಶಾಲಾ–ಕಾಲೇಜು ಆವರಣದಲ್ಲಿ ನಿಲುಗಡೆ ನಿಷೇಧಿಸಿ ಸಾರಿಗೆ ಇಲಾಖೆ ಸುತ್ತೋಲೆ ಹೊರಡಿಸಿದೆ.
ನ್ಯೂ ಇಂಡಿಯಾ ಇನ್ಶೂರೆನ್ಸ್ ಕಂಪೆನಿ ಹಾಗೂ ಹೇಮಂತ್ ಎಂಬುವರ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ತೀರ್ಪು ಉಲ್ಲೇಖಿಸಿ ಈ ಸುತ್ತೋಲೆ ಹೊರಡಿಸಲಾಗಿದೆ.
‘ಚಾಲನಾ ಪರವಾನಗಿ ಹೊಂದಿರದ ವಿದ್ಯಾರ್ಥಿಗಳ ದ್ವಿಚಕ್ರ ವಾಹನ ಹಾಗೂ ಕಾರುಗಳಿಗೆ ಆವರಣದಲ್ಲಿ ನಿಲುಗಡೆಗೆ ಅವಕಾಶ ನೀಡಬಾರದು. ಈ ಸೂಚನೆಯನ್ನು ಉಲ್ಲಂಘಿಸುವ ವಿದ್ಯಾರ್ಥಿಗಳನ್ನು ವಿದ್ಯಾಸಂಸ್ಥೆಯಿಂದ ಹೊರಹಾಕಬೇಕು’ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಈ ಸುತ್ತೋಲೆ ಉಲ್ಲೇಖಿಸಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ರಾಜ್ಯದ ಎಲ್ಲ ಉಪನಿರ್ದೇಶಕರು ಹಾಗೂ ಕಾಲೇಜುಗಳ ಪ್ರಾಂಶುಪಾಲರಿಗೆ ಪತ್ರ ಬರೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.