ಬೆಂಗಳೂರು: ಶಂಕರ ಕಣ್ಣಿನ ಆಸ್ಪತ್ರೆಯ ತಜ್ಞರ ತಂಡವು ದೃಷ್ಟಿದೋಷದಿಂದ ಬಳಲುತ್ತಿದ್ದ ಮಹಿಳೆಗೆ ‘ಟೂತ್ ಇನ್ ಐ’ ಎಂಬ ಶಸ್ತ್ರಚಿಕಿತ್ಸೆ ಮಾಡಿದೆ.
ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೈದ್ಯೆ ಪಲ್ಲವಿ ಜೋಶಿ , ‘ಕಾರ್ನಿಯಾ ಸಮಸ್ಯೆಯಿಂದಾಗಿ 35 ವರ್ಷದ ಮಮತಾ ದೃಷ್ಟಿ ಕಳೆದುಕೊಂಡಿದ್ದರು. 9 ತಿಂಗಳಲ್ಲಿ ಮೂರು ಹಂತಗಳಲ್ಲಿ ಶಸ್ತ್ರ ಚಿಕಿತ್ಸೆ ನಡೆಸಿದೆವು. ಮಮತಾ ಅವರು ಶೇ 80ರಷ್ಟು ದೃಷ್ಟಿಯನ್ನು ಮರಳಿ ಪಡೆದಿದ್ದಾರೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.