ಮಹದೇವಪುರ: `ರಾಜ್ಯದಲ್ಲಿ ವೋಲ್ವೊ ಕಂಪೆನಿಯು ಹೆಚ್ಚು ಘಟಕಗಳನ್ನು ಸ್ಥಾಪಿಸುವ ಮೂಲಕ ಕನ್ನಡಿಗರಿಗೆ ಉದ್ಯೋಗಾವಕಾಶಗಳನ್ನು ನೀಡಲು ಮುಂದಾಗಬೇಕು~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಗುರುವಾರ ಇಲ್ಲಿ ಮನವಿ ಮಾಡಿದರು.
ವೋಲ್ವೊ ಕಂಪೆನಿಯು ನಗರದ ವೈಟ್ಫೀಲ್ಡ್ನಲ್ಲಿರುವ ಎಂ.ಎಲ್.ಆರ್. ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಂಪೆನಿಯ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
`ನಗರದ ಹೊಸಕೋಟೆಯಲ್ಲಿ ಕಂಪೆನಿಯ ಘಟಕವು ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. ರಾಜ್ಯದ ಹಲವೆಡೆ ಕಂಪೆನಿಯ ಇಂತಹ ಘಟಕಗಳನ್ನು ಸ್ಥಾಪಿಸುವ ಮೂಲಕ ರಾಜ್ಯದ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ನೀಡಬೇಕು~ ಎಂದು ಅವರು ಕೋರಿದರು.
`ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪ್ರಶಸ್ತಿಗಳು ಲಭಿಸಲು ವೋಲ್ವೊ ಬಸ್ಗಳ ಉತ್ತಮ ಸೇವೆ ಕೂಡ ಕಾರಣ~ ಎಂದು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಸ್ವೀಡನ್ನ ವೋಲ್ವೊ ಬಸ್ ಕಾರ್ಪೊರೇಷನ್ ಅಧ್ಯಕ್ಷ ಮತ್ತು ಸಿಇಓ ಹಕನ್ ಕಾರ್ಲ್ಸನ್, ಸಚಿವರಾದ ಆರ್. ಅಶೋಕ, ಬಿ.ಎನ್.ಬಚ್ಚೇಗೌಡ, ಶಾಸಕ ಅರವಿಂದ ಲಿಂಬಾವಳಿ ಇತರರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.