ADVERTISEMENT

ಕನ್ನಡ ಕಲಿಕಾ ಕೇಂದ್ರಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 21 ಮೇ 2017, 19:30 IST
Last Updated 21 ಮೇ 2017, 19:30 IST
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಮಹದೇವಪುರ ಕ್ಷೇತ್ರ ಘಟಕದ ವತಿಯಿಂದ ವರ್ತೂರು ಸಮೀಪದ ಮಂಜುನಾಥ್ ಬಡಾವಣೆಯಲ್ಲಿ ತೆರೆದಿರುವ ಕನ್ನಡ ಕಲಿಕಾ ಕೇಂದ್ರಕ್ಕೆ ಚಾಲನೆ ನೀಡಲಾಯಿತು. 
 
ಪರಿಷತ್ತಿನ ನಗರ ಜಿಲ್ಲಾ ಘಟಕದ ಅಧ್ಯಕ್ಷ ಮಾಯಣ್ಣ ಮಾತನಾಡಿ, ‘ನಗರದಲ್ಲಿ ಅನ್ಯಭಾಷಿಕರು ಹೆಚ್ಚಾಗಿದ್ದಾರೆ. ಅವರಿಗೆ ಕನ್ನಡ ಭಾಷೆಯನ್ನು ಕಲಿಸುವ ಉದ್ದೇಶದಿಂದ ನಗರದಾದ್ಯಂತ ಕಲಿಕಾ ಕೇಂದ್ರಗಳು ತೆರೆಯಲಾಗುತ್ತಿದೆ. ಇದಕ್ಕೆ ಅನ್ಯ ಭಾಷಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ’ ಎಂದರು.
 
‘ಮಹದೇವಪುರ ಕ್ಷೇತ್ರದಲ್ಲಿ ಐ.ಟಿ., ಬಿ.ಟಿ. ಕಂಪೆನಿಗಳು ಹೆಚ್ಚಾಗಿವೆ. ಇಲ್ಲಿನ ಉದ್ಯೋಗಿಗಳು ಕಲಿಕಾ ಕೇಂದ್ರದಲ್ಲಿ ಹೆಸರು ನೋಂದಾಯಿಸಿಕೊಂಡು ಕನ್ನಡ ಭಾಷೆ ಕಲಿಯಬೇಕು’ ಎಂದು ಮನವಿ ಮಾಡಿದರು.
 
ಮಹದೇವಪುರ ಕ್ಷೇತ್ರ ಘಟಕದ ಅಧ್ಯಕ್ಷ ಡಾ.ವೆ. ಅಜಿತ್ ಮಾತನಾಡಿ, ‘ಮುಂದಿನ ದಿನಗಳಲ್ಲಿ ಕ್ಷೇತ್ರದ ಪ್ರತಿ ವಾರ್ಡ್‌ನಲ್ಲಿ ಕಲಿಕಾ ಕೇಂದ್ರಗಳನ್ನು ತೆರೆಯುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.