ADVERTISEMENT

ಕನ್ನಡ ಕಲಿತು ಮಾತನಾಡಲು ಸಲಹೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2012, 22:00 IST
Last Updated 6 ಡಿಸೆಂಬರ್ 2012, 22:00 IST

ಬೆಂಗಳೂರು: ವಿದ್ಯಾರಣ್ಯಪುರ ರಾಮಚಂದ್ರಾಪುರದ ಬ್ಲೂಮ್ ಫೀಲ್ಡ್ ಗಾರ್ಡನ್ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್ ಆಶ್ರಯದಲ್ಲಿ ಕನ್ನಡಿಗರು ಹಾಗೂ ಇತರ ರಾಜ್ಯಗಳ ನಿವಾಸಿಗಳು ಜೊತೆಯಾಗಿ ಇತ್ತೀಚೆಗೆ ಕನ್ನಡ ರಾಜ್ಯೋತ್ಸವ ಆಚರಿಸಿದರು.

ಉದ್ಯಮಿ ಮಾಧವನ್ ಕಾರ್ಯಕ್ರಮ ಉದ್ಘಾಟಿಸಿ ನಾಡಿನ ಸಂಸ್ಕೃತಿ ಹಾಗೂ ಕನ್ನಡ ಸಾಹಿತ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅಸೋಸಿಯೇಶನ್‌ನ ಸದಸ್ಯ ನಾರಾಯಣ ಗೌಡ ಮಾತನಾಡಿ, `ರಾಜ್ಯದಲ್ಲಿ ನೆಲೆಸಿರುವ ಇತರ ಭಾಷೆಗಳ ಜನರು ಕನ್ನಡ ಕಲಿತು ಕನ್ನಡಿಗರೊಂದಿಗೆ ಸ್ನೇಹ ಭಾವದಿಂದ ಇರಬೇಕು' ಎಂದು ಕಿವಿಮಾತು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.