ADVERTISEMENT

ಕರ್ತವ್ಯ ಲೋಪ: ಅಮಾನತು

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2012, 19:40 IST
Last Updated 18 ಫೆಬ್ರುವರಿ 2012, 19:40 IST

ಬೆಂಗಳೂರು: ಕರ್ತವ್ಯ ಲೋಪ ಆರೋಪದ ಮೇಲೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಬ್ ಇನ್‌ಸ್ಪೆಕ್ಟರ್ ಖಲಂದರ್ ಖಾನ್ ಅವರನ್ನು ಶುಕ್ರವಾರ ಅಮಾನತು ಮಾಡಲಾಗಿದೆ.

`ವಿದೇಶಿಯರು ನಕಲಿ ಪಾಸ್‌ಪೋರ್ಟ್ ಹಾಗೂ ವೀಸಾ ಬಳಕೆ ಮಾಡಿರುವ ವಿಷಯ ತಿಳಿದಿದ್ದರೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಒಂದು ವರ್ಷದ ಹಿಂದೆಯೇ ಈ ಪ್ರಕರಣ ನಡೆದಿದ್ದು, ಇತ್ತೀಚಿನ ಸಭೆಯೊಂದರಲ್ಲಿ ವಿಷಯ ಬೆಳಕಿಗೆ ಬಂತು. ಇದರ ತನಿಖೆಗೆ ಸಮಿತಿಯೊಂದನ್ನು ರಚನೆ ಮಾಡಿ, ಸಮಿತಿ ನೀಡಿದ ವರದಿಯ ಆಧಾರದ ಮೇಲೆ ಖಾನ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಶುಕ್ರವಾರ ನಗರ ಪೊಲೀಸ್ ಕಮಿಷನರ್ ಜ್ಯೋತಿ ಪ್ರಕಾಶ್ ಮಿರ್ಜಿ ಆದೇಶ ನೀಡಿದ್ದಾರೆ~ ಎಂದು ಈಶಾನ್ಯ ವಿಭಾಗದ ಡಿಸಿಪಿ ಬಿ.ಆರ್.ರವಿಕಾಂತೇಗೌಡ ತಿಳಿಸಿದರು.

ಇದಕ್ಕೂ ಮುನ್ನ 15 ಬಾರಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು ಎಂದು ಅವರು ಮಾಹಿತಿ ನೀಡಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.