ADVERTISEMENT

ಕಲಬೆರಕೆ ಹಾಲು ನಿಷೇಧಿಸಿ

​ಪ್ರಜಾವಾಣಿ ವಾರ್ತೆ
Published 14 ಜನವರಿ 2012, 19:30 IST
Last Updated 14 ಜನವರಿ 2012, 19:30 IST

ಬೆಂಗಳೂರು: ಹೊರ ರಾಜ್ಯಗಳಿಂದ ಬರುವ ಕಲಬೆರಕೆ ಹಾಲನ್ನು ನಿಷೇಧಿಸಬೇಕೆಂದು ಜೆಡಿಎಸ್ ರಾಜ್ಯಘಟಕದ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಹೊರ ರಾಜ್ಯಗಳಿಂದ ಸಾವಿರಾರು ಲೀಟರ್‌ಗಳಷ್ಟು ಹಾಲು ಸರಬರಾಜಾಗುತ್ತಿದ್ದು ಇದರಲ್ಲಿ ಶೇಕಡಾ 22ರಷ್ಟು ಕಲಬೆರಕೆ ಹಾಲು ಬರುತ್ತಿದೆ ಎಂಬ  ಮಾಧ್ಯಮಗಳ  ವರದಿಯಿಂದ ಜನತೆ ಭಯಭೀತರಾಗಿರುವುದರಿಂದ ಸರ್ಕಾರ ಅಗತ್ಯ ಕ್ರಮಕ್ಕೆ ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.