ಹೊಸಕೋಟೆ: ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಘಟನೆ ಅನುಗೊಂಡನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ದುನ್ನಸಂದ್ರ ಕ್ರಾಸ್ ಬಳಿ ನಡೆದಿದೆ.
ಮಂಗಳವಾರ ಬೆಳಿಗ್ಗೆ ರಸ್ತೆ ಬದಿಯ ಹಳ್ಳದಲ್ಲಿ ಶವ ಪತ್ತೆಯಾಗಿದೆ. ಮೃತನನ್ನು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ತಿಪ್ಪೇಸ್ವಾಮಿ (48) ಎಂದು ಗುರುತಿಸಲಾಗಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.