ADVERTISEMENT

ಕಾಮಗಾರಿ: ವಾಹನ ದಟ್ಟಣೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2014, 20:20 IST
Last Updated 2 ಜನವರಿ 2014, 20:20 IST
ನಗರದ ಮೇಖ್ರಿ ವೃತ್ತದಲ್ಲಿ ಬಿಬಿಎಂಪಿ ರಸ್ತೆ ದುರಸ್ತಿ ಕಾಮಗಾರಿ ನಡೆಸುತ್ತಿ­ರು­ವು­ದರಿಂದ ಬಳ್ಳಾರಿ ರಸ್ತೆಯಲ್ಲಿ ಗುರು­ವಾರ ಸಂಚಾರ ದಟ್ಟಣೆ ಉಂಟಾಗಿ ವಾಹನಗಳು ಸಾಲುಗಟ್ಟಿ ನಿಂತಿದ್ದವು 	– ಪ್ರಜಾವಾಣಿ ಚಿತ್ರ
ನಗರದ ಮೇಖ್ರಿ ವೃತ್ತದಲ್ಲಿ ಬಿಬಿಎಂಪಿ ರಸ್ತೆ ದುರಸ್ತಿ ಕಾಮಗಾರಿ ನಡೆಸುತ್ತಿ­ರು­ವು­ದರಿಂದ ಬಳ್ಳಾರಿ ರಸ್ತೆಯಲ್ಲಿ ಗುರು­ವಾರ ಸಂಚಾರ ದಟ್ಟಣೆ ಉಂಟಾಗಿ ವಾಹನಗಳು ಸಾಲುಗಟ್ಟಿ ನಿಂತಿದ್ದವು – ಪ್ರಜಾವಾಣಿ ಚಿತ್ರ   

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೇಖ್ರಿ ವೃತ್ತದ ಸೇತುವೆಯ ಕೆಳಭಾಗದಲ್ಲಿ ರಸ್ತೆ ದುರಸ್ತಿ ಕಾಮಗಾರಿ ನಡೆಸುತ್ತಿರು­ವುದರಿಂದ ಗುರುವಾರ ಬಳ್ಳಾರಿ ರಸ್ತೆ, ಜಯಮಹಲ್‌ ರಸ್ತೆ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಯಿತು.

ವಾಹನಗಳು ಗಂಟೆಗಟ್ಟಲೆ ರಸ್ತೆಯಲ್ಲೇ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಂಜೆಯ ವೇಳೆಗೆ ವಾಹನ ದಟ್ಟಣೆ ಹೆಚ್ಚಾಗಿ ರಾತ್ರಿ ಹನ್ನೆರಡು ಗಂಟೆಯವರೆಗೂ ಪ್ರಯಾಣಿಕರು ಪರದಾಡುವಂತಾಯಿತು. ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರಿಗೆ ತೀವ್ರ ತೊಂದರೆಯಾಯಿತು.

‘ಕಾವೇರಿ ಜಂಕ್ಷನ್‌ನಿಂದ ಹೆಬ್ಬಾಳದ ಕಡೆಗೆ ಹೋಗುವ ಮಾರ್ಗದಲ್ಲಿ ಮೇಖ್ರಿ ವೃತ್ತ ಅಂಡರ್‌ಪಾಸ್‌ನಲ್ಲಿ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದೆ. ಅಂಡರ್‌­ಪಾಸ್‌ನಲ್ಲಿ ಮಳೆ ನೀರು ಪಂಪ್‌ ಮಾಡುವ ಜಾಗದ ಮೆಸ್‌ ಮರು ಅಳವಡಿಕೆ ನಡೆಯುತ್ತಿದೆ. ಹಾಳಾಗಿದ್ದ ಅಂಡರ್‌ಪಾಸ್‌ ರಸ್ತೆಗೆ ಕಾಂಕ್ರಿಟ್‌ ಹಾಕಲಾಗುತ್ತಿದೆ. ಹೀಗಾಗಿ ಕಾಮಗಾರಿ ಸ್ವಲ್ಪ ವಿಳಂಬವಾಗಿದೆ. ಶನಿವಾರದ ಹೊತ್ತಿಗೆ ಕಾಮಗಾರಿ ಮುಗಿಯಲಿದೆ’ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.