ADVERTISEMENT

ಕಾರವಾರಕ್ಕೆ ರೈಲು ಸಂಚಾರ ಆರಂಭ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2012, 19:30 IST
Last Updated 17 ಅಕ್ಟೋಬರ್ 2012, 19:30 IST

ಬೆಂಗಳೂರು: ರಾಜಧಾನಿ ಬೆಂಗಳೂರಿನಿಂದ ಮಂಗಳೂರು ಮಾರ್ಗವಾಗಿ ಕಣ್ಣೂರಿಗೆ ತೆರಳುವ ರಾತ್ರಿ ರೈಲನ್ನು ಬುಧವಾರದಿಂದಲೇ ಕಾರವಾರಕ್ಕೆ ವಿಸ್ತರಿಸಲಾಗಿದೆ ಎಂದು ರೈಲ್ವೆ ಮಂಡಳಿ ಅಧಿಕಾರಿಗಳು ಹೈಕೋರ್ಟ್‌ಗೆ ತಿಳಿಸಿದರು.

ಬೆಂಗಳೂರು - ಕಣ್ಣೂರು ರೈಲನ್ನು ರದ್ದು ಮಾಡಿ, ಅದನ್ನು ಕಾರವಾರಕ್ಕೆ ಓಡಿಸಬೇಕು ಎಂದು ಕೋರಿ ಶಂಕರ ಎಸ್. ಭಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಅಧಿಕಾರಿಗಳು ಈ ವಿಷಯ ತಿಳಿಸಿದರು.

ಬೆಂಗಳೂರಿನಿಂದ ಮಂಗಳೂರಿನವರೆಗೆ 18 ಬೋಗಿಗಳನ್ನು ಹೊಂದಿರುವ ರಾತ್ರಿ ರೈಲು ಓಡಿಸಲಾಗುತ್ತದೆ. ರೈಲನ್ನು ಮಂಗಳೂರಿನಲ್ಲಿ ವಿಭಜಿಸಿ, ಐದು ಬೋಗಿಗಳನ್ನು ಕಣ್ಣೂರಿಗೆ ಹಾಗೂ 13 ಬೋಗಿಗಳನ್ನು ಕಾರವಾರಕ್ಕೆ ಓಡಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.