ಬೆಂಗಳೂರು: ನಗರದ ಸಿಲ್ಕ್ಬೋರ್ಡ್ ಜಂಕ್ಷನ್ ಬಳಿ ಜನಾರ್ದನರೆಡ್ಡಿ ಎಂಬುವರು ಕಾರಿನಲ್ಲಿ ಸಾಗಿಸುತ್ತಿದ್ದ ₹42.40 ಲಕ್ಷ ನಗದನ್ನು ಚುನಾವಣಾ ಆಯೋಗದ ಸಂಚಾರಿ ದಳವು ಮಂಗಳವಾರ ವಶಪಡಿಸಿಕೊಂಡಿದೆ.
‘ಕೋಣನಕುಂಟೆ ಕ್ರಾಸ್ ನಲ್ಲಿರುವ ಮಾನಸ ಚಿತ್ರ ಮಂದಿರದ ಮಾಲೀಕರಾದ ಅವರು, ಜಯನಗರದಲ್ಲಿರುವ ತಮ್ಮ ಮನೆಗೆ
ಹಣ ಸಾಗಿಸುತ್ತಿದ್ದರು. ಈ ಹಣಕ್ಕೆ ಯಾವುದೇ ದಾಖಲೆಗಳು ಇರಲಿಲ್ಲ. ಹೀಗಾಗಿ, ಅದನ್ನು ವಶಕ್ಕೆ ಪಡೆದು ಆದಾಯ ತೆರಿಗೆ ಅಧಿಕಾರಿಗಳಿಗೆ ಒಪ್ಪಿಸಿದ್ದೇವೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಸಂಚಾರಿ ದಳದ ಕಾರ್ಯನಿರ್ವಹಕ ಮ್ಯಾಜಿಸ್ಟ್ರೇಟ್ ನಿರಂಜನ್ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.