ADVERTISEMENT

ಕಾರು ಅಡ್ಡಗಟ್ಟಿ ₹ 20 ಲಕ್ಷ ದರೋಡೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2017, 19:30 IST
Last Updated 16 ಅಕ್ಟೋಬರ್ 2017, 19:30 IST

ಬೆಂಗಳೂರು: ಹೊಸಕೆರೆಹಳ್ಳಿ ನೈಸ್ ರಸ್ತೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿದ ದುಷ್ಕರ್ಮಿಗಳು ₹20 ಲಕ್ಷ ನಗದು ದೋಚಿದ್ದಾರೆ.

ಚಾಮರಾಜನಗರದ ಗುಂಡ್ಲುಪೇಟೆಯಿಂದ ನಗರಕ್ಕೆ ಬಂದಿದ್ದ ಕರೀಂ, ರಿಯಾಜ್ ಹಣ ಕಳೆದುಕೊಂಡಿದ್ದಾರೆ. ಜಮೀನು ಖರೀದಿಗೆ ಅವರು ಹಣವನ್ನು ತೆಗೆದುಕೊಂಡು ಕಾರಿನಲ್ಲಿ ಹೋಗುತ್ತಿದ್ದರು. ಬೈಕ್‌ನಲ್ಲಿ ವೇಗವಾಗಿ ಬಂದು ದುಷ್ಕರ್ಮಿಗಳಿಬ್ಬರು ಕಾರನ್ನು ಅಡ್ಡಗಟ್ಟಿ ಹಣ ದೋಚಿದ್ದಾರೆ. ಬಳಿಕ ಕರೀಂ ಅವರು ಠಾಣೆಗೆ ದೂರು ನೀಡಿದ್ದಾರೆ.

ಪರಿಚಯಸ್ಥರಿಂದ ಈ ಕೃತ್ಯ ನಡೆದಿರುವ ಶಂಕೆ ಇದೆ. ಘಟನೆ ನಡೆದ ಸ್ಥಳದ ಸುತ್ತಮುತ್ತಲಿನ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದೇವೆ ಬ್ಯಾಟರಾಯನಪುರ ಪೊಲೀಸರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.