ADVERTISEMENT

ಕಾರು ಮಗುಚಿ ನಗರದ ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2018, 20:23 IST
Last Updated 28 ಫೆಬ್ರುವರಿ 2018, 20:23 IST

ಮಾಗಡಿ: ಬುಧವಾರ ರಾತ್ರಿ ಕಾಳಾರಿ ಕ್ರಾಸ್‌ ಬಳಿ ಕಾರು ಮಗುಚಿ ಬಿದ್ದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತರನ್ನು ಬೆಂಗಳೂರು ಆಂಜನ ನಗರದ ಪುಟ್ಟಸ್ವಾಮಿ(46), ಬಸವರಾಜು(40) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ನಾಗಣ್ಣ ಅವರನ್ನು ಬೆಂಗಳೂರಿನ ನಿಮ್ಹಾನ್ಸ್‌ಗೆ ದಾಖಲಿಸಲಾಗಿದೆ. ಭುವನೇಶ್ವರ್‌ಗೆ ಗಾಯಗಳಾಗಿವೆ.

ಬೆಂಗಳೂರಿನ ಆಂಜನಾ ನಗರದಿಂದ ಕುಣಿಗಲ್‌ ಗೆ ಹೋಗಿ ಹಿಂತಿರುಗುತ್ತಿದ್ದಾಗ ದುರ್ಘಟನೆ ನಡೆದಿದೆ ಎಂದು ಸಬ್‌ ಇನ್‌ಸ್ಪೆಕ್ಟರ್‌ ಬಿ.ರವಿ ತಿಳಿಸಿದ್ದಾರೆ. ಗಾಯಾಳುಗಳು ಮಾಗಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಮೃತರಿಬ್ಬರ ಶವಗಳನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಮಾಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.