
ಪ್ರಜಾವಾಣಿ ವಾರ್ತೆಬೆಂಗಳೂರು: `ಕಾರ್ಮಿಕ ವರ್ಗದ ಬೇಡಿಕೆಗಳ ಬಗ್ಗೆ ಮಂಗಳವಾರ (ಜು. 10) ಸಾಮೂಹಿಕ ಪ್ರದರ್ಶನಗಳ ಮೂಲಕ ಪ್ರತಿಭಟನೆ ನಡೆಸಲಾಗುವುದು~ ಎಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಎಚ್.ವಿ.ಅನಂತಸುಬ್ಬರಾವ್ ಹೇಳಿದರು.
ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಬೆಲೆ ಏರಿಕೆ ಮುಗಿಲು ಮುಟ್ಟಿದೆ. ಆದರೆ, ಜನ ಸಾಮಾನ್ಯರ ಉಳಿವಿಗಾಗಿ ಸೂಕ್ತ ಕ್ರಮಗಳ ಮೂಲಕ ಬೆಲೆ ಏರಿಕೆಯನ್ನು ಸರ್ಕಾರ ತಡೆಗಟ್ಟಬೇಕು. ನಿಯಂತ್ರಿತ ಬೆಲೆಯಲ್ಲಿ ಎಲ್ಲರಿಗೂ ಅಗತ್ಯ ವಸ್ತುಗಳು ದೊರೆಯುವಂತೆ ಕ್ರಮ ಕೈಗೊಳ್ಳಬೇಕು~ ಎಂದರು.
`ಗುತ್ತಿಗೆ ಹಾಗೂ ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕು. ಹಂತ ಹಂತವಾಗಿ ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು ಎಂದರು.
ಗೋಷ್ಠಿಯಲ್ಲಿ ಕಾರ್ಯದರ್ಶಿಗಳಾದ ಎಸ್.ನಾಗರಾಜು, ಡಿ.ಎ. ವಿಜಯ ಭಾಸ್ಕರ್, ಶಿವಣ್ಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.