ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಎನ್.ಪ್ರಭುದೇವ್ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆ ಪ್ರಕರಣ ದಾಖಲಾಗಿದೆ. ಬೆಂಗಳೂರು ವಿವಿಯ ಎಂಜಿನಿಯರ್ ಎನ್.ಪುಟ್ಟಸ್ವಾಮಿ ದೂರು ನೀಡಿದವರು.
ನಾನು ಪರಿಶಿಷ್ಟ ಜಾತಿಯವನು ಎಂಬ ಕಾರಣಕ್ಕೆ ಪ್ರಭುದೇವ್ ಅವರು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ನನ್ನ ಅಧಿಕಾರವನ್ನು ಕಿತ್ತುಕೊಂಡಿದ್ದಾರೆ ಹಾಗೂ ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ. ಅವರ ಇಂತಹ ವರ್ತನೆಯಿಂದ ನನಗೆ ಹೃದಯಾಘಾತವಾಯಿತು ಎಂದು ಪುಟ್ಟಸ್ವಾಮಿ ದೂರಿದ್ದಾರೆ ಎಂದು ಪೊಲೀಸರು ತಿಳಿಸಿದರು.
ಘಟನೆ ಸಂಬಂಧ ಗುರುವಾರ (ಮಾ.1) ಪುಟ್ಟಸ್ವಾಮಿ ಅವರ ಮಗ ಪಿ.ಮಾಕೇಶ್ ದೂರು ನೀಡಿದ್ದರು. ಆದರೆ, ಪ್ರಕರಣ ದಾಖಲಾಗದ ಹಿನ್ನೆಲೆಯಲ್ಲಿ ಪುಟ್ಟಸ್ವಾಮಿ ಅವರು ಭಾನುವಾರ ಪುನಃ ದೂರು ನೀಡಿದರು.
ಇದರಿಂದ ಕುಲಪತಿ ವಿರುದ್ಧ ಪೊಲೀಸರು ಜಾತಿನಿಂದನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.