ADVERTISEMENT

ಕೆಂಪಾಪುರ: ಚರಂಡಿ ನೀರು ರಸ್ತೆಗೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2019, 19:46 IST
Last Updated 5 ಫೆಬ್ರುವರಿ 2019, 19:46 IST
ಚಿಕ್ಕಬಾಣಾವರ ಗ್ರಾಮದ ಕೆಂಪಾಪುರ ಮುಖ್ಯರಸ್ತೆಯಲ್ಲಿ ಕಲುಷಿತ ಚರಂಡಿ ನೀರು ನಿಂತಿರುವುದು
ಚಿಕ್ಕಬಾಣಾವರ ಗ್ರಾಮದ ಕೆಂಪಾಪುರ ಮುಖ್ಯರಸ್ತೆಯಲ್ಲಿ ಕಲುಷಿತ ಚರಂಡಿ ನೀರು ನಿಂತಿರುವುದು   

ಹೆಸರಘಟ್ಟ: ಚಿಕ್ಕಬಾಣಾವರ ಗ್ರಾಮದ ಕೆಂಪಾಪುರ ಮುಖ್ಯರಸ್ತೆಯಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿದು ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ.

ಒಂದು ತಿಂಗಳಿನಿಂದ ಚರಂಡಿಗೆ ಮಣ್ಣು ಬಿದ್ದು ಕಲುಷಿತ ನೀರು ರಸ್ತೆ ಮೇಲೆ ಹರಿಯುತ್ತಿದೆ. ರಸ್ತೆಯ ಗುಂಡಿಗಳಲ್ಲಿ ನಿಂತ ನೀರು ದುರ್ನಾತ ಬೀರುತ್ತಿದೆ. ಈ ರಸ್ತೆಯ ಅನತಿ ದೂರದಲ್ಲಿ ಖಾಸಗಿ ಶಾಲೆ ಮತ್ತು ಗ್ರಾಮಸ್ಥರ ಮನೆಗಳಿವೆ. ಶಾಲಾ ಮಕ್ಕಳು ಈ ಗಬ್ಬುವಾಸನೆ ಸೇವಿಸುತ್ತಾ ಓಡಾಡುತ್ತಿದ್ದಾರೆ. ಗ್ರಾಮ ಪಂಚಾಯಿತಿಯ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುತ್ತಾರೆ ಗ್ರಾಮದ ನಿವಾಸಿ ಮಹೇಶ್.

‘ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಚನ್ನಕೇಶವಮೂರ್ತಿ ಮತ್ತು ಸದಸ್ಯೆ ಸ್ನೇಹಾ ಅವರು ನಿತ್ಯ ಇದೇ ರಸ್ತೆ ಮೇಲೆ ಓಡಾಡುತ್ತಾರೆ. ಆದರೆ ಅವರಿಗೆ ಈ ಸಮಸ್ಯೆಯನ್ನು ಬಗೆಹರಿಸುವ ಕಾಳಜಿಯೇ ಇಲ್ಲವಾಗಿದೆ’ ಎಂದು ಮಹೇಶ್‌ ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಚರಂಡಿಯ ಕಲುಷಿತ ನೀರಿನಲ್ಲಿ ವಿಪರೀತ ಸೊಳ್ಳೆಗಳು ಉತ್ಪತ್ತಿಯಾಗುತ್ತದೆ.ಚರಂಡಿಯ ನೀರು ಸಲೀಸಾಗಿ ಹೋಗುವಂತೆ ಪಂಚಾಯಿತಿ ಕಾಳಜಿ ವಹಿಸಬೇಕು ಎಂದು ಡಾ.ಸಂಜೀವ್ ಸಲಹೆ ನೀಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ವಿದ್ಯಾ ಅವರು ಪ್ರತಿಕ್ರಿಯಿಸಿ, ಚರಂಡಿಯಲ್ಲಿ ಬಿದ್ದಿರುವ ಮಣ್ಣುನ್ನು ತೆಗೆಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.