ADVERTISEMENT

ಕೆಐಎಎಲ್‌ನಲ್ಲಿ ಸಾಂಸ್ಕೃತಿಕ ಸಡಗರ

​ಪ್ರಜಾವಾಣಿ ವಾರ್ತೆ
Published 17 ಜನವರಿ 2016, 19:30 IST
Last Updated 17 ಜನವರಿ 2016, 19:30 IST
ಕಾರ್ಯಕ್ರಮದಲ್ಲಿ ಕಲಾವಿದರು ನೃತ್ಯ ಪ್ರದರ್ಶಿಸಿದರು
ಕಾರ್ಯಕ್ರಮದಲ್ಲಿ ಕಲಾವಿದರು ನೃತ್ಯ ಪ್ರದರ್ಶಿಸಿದರು   

ಬೆಂಗಳೂರು: ಸಂಕ್ರಾಂತಿ ಹಬ್ಬದ ಅಂಗವಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎಎಲ್‌) ಹಮ್ಮಿಕೊಳ್ಳಲಾಗಿದ್ದ ಮೂರು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮ ಭಾನುವಾರ ಮುಕ್ತಾಯವಾಯಿತು.

ಉತ್ಸವದ ಅಂಗವಾಗಿ ವಿಮಾನ ನಿಲ್ದಾಣವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಕಲಾವಿದೆ ಕೃಪಾ ರಾಮಚಂದ್ರನ್ ಹಾಗೂ ತಂಡದವರು ಪ್ರದರ್ಶಿಸಿದ ಭರತನಾಟ್ಯ ಆಕರ್ಷಕವಾಗಿತ್ತು. ವಿವೇಕಾನಂದ ಕಲಾ ಕೇಂದ್ರ ಹಾಗೂ ತಂಡದವರು ಪ್ರದರ್ಶಿಸಿದ ನೃತ್ಯ ಗಮನ ಸೆಳೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.