ಬೆಂಗಳೂರು: ಕರ್ನಾಟಕ ಜನತಾ ಪಕ್ಷದ ರಾಜ್ಯ ಕಾರ್ಯದರ್ಶಿ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ ರಾಜೀನಾಮೆ ನೀಡಿದ್ದಾರೆ.
ವಿಧಾನಸಭೆ ಚುನಾವಣೆ ನಂತರ ಕೆಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಸಾರ್ವಜನಿಕ ಹಿತಾಸಕ್ತಿಗೆ ಬದಲು ಸ್ವಹಿತಾಸಕ್ತಿ ಅನುಸರಿಸುತ್ತಿದ್ದಾರೆ.
ಜಾತ್ಯತೀತತೆಯ ಬಗ್ಗೆ ರಾಜ್ಯದ ಉದ್ದಗಲಕ್ಕೂ ಭಾಷಣ ಮಾಡಿ ಈಗ ಕೋಮುವಾದಿ ಪಕ್ಷವನ್ನು ಬೆಂಬಲಿಸಲು ಮುಂದಾಗಿದ್ದಾರೆ. ಇದರಿಂದಾಗಿ ಕೆಜೆಪಿ ತ್ಯಜಿಸುತ್ತಿರುವುದಾಗಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.