ADVERTISEMENT

ಕೆರೆಗಳ ಮಾಲಿನ್ಯ: ಮರು ಪರಿಶೀಲನಾ ಅರ್ಜಿ ವಜಾ

ದಂಡ ರದ್ದತಿ ಕೋರಿದ್ದ ಅರ್ಜಿ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2019, 19:35 IST
Last Updated 7 ಫೆಬ್ರುವರಿ 2019, 19:35 IST

ನವದೆಹಲಿ: ಬೆಂಗಳೂರಿನ ಕೆರೆಗಳ ಮಾಲಿನ್ಯಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿ ಕಳೆದ ಡಿಸೆಂಬರ್‌ 6ರಂದು ನೀಡಿರುವ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ತಿರಸ್ಕರಿಸಿದೆ.

ಬೆಳ್ಳಂದೂರು, ವರ್ತೂರು ಮತ್ತು ಅಗರ ಕೆರೆಗಳ ಮಾಲಿನ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗಳಿಗೆ ವಿಧಿಸಿದ್ದ ₹ 7೫ ಕೋಟಿ ದಂಡ ರದ್ದುಪಡಿಸಬೇಕು. ಕೆರೆಗಳ ಪುನಶ್ಚೇತನ ಕಾರ್ಯಕ್ಕಾಗಿ ₹೫೦೦ ಕೋಟಿ ಮೀಸಲಿಡಬೇಕು ಎಂಬ ತೀರ್ಪಿನ ಮರು ಪರಿಶೀಲಿಸಬೇಕು ಎಂದು ಸರ್ಕಾರ ಕೋರಿತ್ತು.

ಕೆರೆಗಳು ಮತ್ತು ರಾಜ ಕಾಲುವೆಗಳ ರಕ್ಷಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ಪರಿಶೀಲನೆಗೆ ನಿಯೋಜಿಸಿದ್ದ ಸಮಿತಿ ವರದಿ ಸಲ್ಲಿಸಿದೆ. ವರದಿಯನ್ನು ಆಧರಿಸಿ ತೀರ್ಪು ನೀಡಲಾಗಿದೆ ಎಂದು ನ್ಯಾಯಮೂರ್ತಿ ಆದರ್ಶಕುಮಾರ್ ಗೋಯಲ್ ನೇತೃತ್ವದ ಪೀಠ ತಿಳಿಸಿದೆ.

ADVERTISEMENT

ದಂಡದ ಮೊತ್ತವನ್ನು ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ ಪಾವತಿಸಬೇಕು, ಕೆರೆಗಳ ಅಭಿವೃದ್ಧಿ ಕುರಿತ ಕಾರ್ಯಕ್ಷಮತೆಯ ಖಾತರಿ ಹಣವನ್ನಾಗಿ ₹ 100 ಕೋಟಿ ಪ್ರತ್ಯೇಕವಾಗಿ ಇರಿಸಬೇಕು ಎಂದು ಹಸಿರುಪೀಠ ತೀರ್ಪಿನಲ್ಲಿ ತಿಳಿಸಿತ್ತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.