ಬೆಂಗಳೂರು: ಈಜಲು ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಎಚ್ಎಎಲ್ ಬಳಿಯ ದೊಡ್ಡನೆಕ್ಕುಂದಿಯಲ್ಲಿ ಮಂಗಳವಾರ ನಡೆದಿದೆ.
ಇಸ್ಲಾಂಪುರ ನಿವಾಸಿ ಸಾದಿಕ್ ಮೃತಪಟ್ಟವರು. ಕೂಲಿ ಕೆಲಸ ಮಾಡುತ್ತಿದ್ದ ಅವರು ಸಂಜೆ 4 ಗಂಟೆ ಸುಮಾರಿಗೆ ದೊಡ್ಡನೆಕ್ಕುಂದಿ ಕೆರೆಗೆ ಈಜಲು ಹೋಗಿದ್ದಾಗ ಘಟನೆ ನಡೆದಿದೆ ಎಂದು ಎಚ್ಎಎಲ್ ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆ: ಸಲ್ಮಾತಾಜ್ (23) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಗಜೀವನ್ರಾಮ್ನಗರದಲ್ಲಿ ಬುಧವಾರ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು ಕೊಠಡಿಯ ಫ್ಯಾನ್ಗೆ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.