ಬೆಂಗಳೂರು: ಸಿಐಡಿ ಡಿಐಜಿ ಸೋನಿಯಾ ನಾರಂಗ್ ಅವರಂತೆಯೇ ರಾಜ್ಯ ಪೊಲೀಸ್ ಇಲಾಖೆಯ ಮೂವರು ಐಪಿಎಸ್ ಅಧಿಕಾರಿಗಳು ಇದೇ ಏಪ್ರಿಲ್ನಲ್ಲಿ ಕೇಂದ್ರ ಸೇವೆಗೆ ತೆರಳಲಿದ್ದಾರೆ.
ಮೈಸೂರು ಪೊಲೀಸ್ ತರಬೇತಿ ಶಾಲೆಯ ಮುಖ್ಯಸ್ಥ ಮಧುಕರ್ ಶೆಟ್ಟಿ, ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಲಾಬೂರಾಮ್ ಹಾಗೂ ಸಿಸಿಬಿ ಡಿಸಿಪಿ ಕೌಶಲೇಂದ್ರ ಅವರು ಕೇಂದ್ರ ಸೇವೆಗೆ ನಿಯುಕ್ತಿಗೊಂಡಿದ್ದು, ಏಪ್ರಿಲ್ 1ರಂದು ರಾಜ್ಯ ಸೇವೆಯಿಂದ ಬಿಡುಗಡೆಯಾಗಲಿದ್ದಾರೆ. ಇದೇ ವೇಳೆ ನಾರಂಗ್ ಸಹ ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ತೆರಳಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.