ಬೆಂಗಳೂರು: ಸುಬ್ರಹ್ಮಣ್ಯಪುರ ಸಮೀಪದ ಹನುಮಗಿರಿ ಬೆಟ್ಟದ ಬಳಿ ನಡೆದಿದ್ದ ಅಭಿಷೇಕ್ (14) ಎಂಬ ಬಾಲಕನ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅಭಿಷೇಕ್ನ ಸ್ನೇಹಿತರಾದ ಆರೋಪಿಗಳು ಬಾಲಕರಾಗಿದ್ದಾರೆ. ಅಭಿಷೇಕ್, ಆ ಆರೋಪಿಗಳಲ್ಲೆ ಒಬ್ಬನ ತಂಗಿಗೆ ಚುಡಾಯಿಸುತ್ತಿದ್ದ. ಇದರಿಂದ ಕೋಪಗೊಂಡಿದ್ದ ಆರೋಪಿ ಬಾಲಕ, ಸ್ನೇಹಿತರ ಜತೆ ಸೇರಿ ಆತನನ್ನು ಹನುಮಗಿರಿ ಬೆಟ್ಟದ ಬಳಿ ಕರೆದೊಯ್ದು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಎಂದು ಸುಬ್ರಹ್ಮಣ್ಯಪುರ ಪೊಲೀಸರು ತಿಳಿಸಿದ್ದಾರೆ. ಇನ್ಸ್ಪೆಕ್ಟರ್ ಬಾಳೇಗೌಡ, ಎಸ್ಐ ಸಿದ್ದರಾಜು ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.