ADVERTISEMENT

ಕೋದಂಡರಾಮ ನಗರ: ಆಸ್ಪತ್ರೆ ನಿಮಾರ್ಣಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2013, 19:42 IST
Last Updated 23 ಸೆಪ್ಟೆಂಬರ್ 2013, 19:42 IST
ಸರ್ಜಾಪುರ ರಸ್ತೆಯ ಹಾಲನಾಯಕನ ಹಳ್ಳಿ  ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೋದಂಡರಾಮ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಅರವಿಂದ ಲಿಂಬಾವಳಿ ಶಂಕುಸ್ಥಾಪನೆ  ನೆರವೇರಿಸಿದರು. ಪಂಚಾಯ್ತಿ ಅಧ್ಯಕ್ಷೆ ಮದ್ದೂರಮ್ಮ, ಬಿಜೆಪಿ ಘಟಕ ಅಧ್ಯಕ್ಷ ಪಣತ್ತೂರು ವೆಂಕಟಸ್ವಾಮಿರೆಡ್ಡಿ, ಮುಖಂಡರಾದ ಶೇಖರರೆಡ್ಡಿ, ರವಿಶಂಕರರೆಡ್ಡಿ ಹಾಜರಿದ್ದರು
ಸರ್ಜಾಪುರ ರಸ್ತೆಯ ಹಾಲನಾಯಕನ ಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೋದಂಡರಾಮ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಅರವಿಂದ ಲಿಂಬಾವಳಿ ಶಂಕುಸ್ಥಾಪನೆ ನೆರವೇರಿಸಿದರು. ಪಂಚಾಯ್ತಿ ಅಧ್ಯಕ್ಷೆ ಮದ್ದೂರಮ್ಮ, ಬಿಜೆಪಿ ಘಟಕ ಅಧ್ಯಕ್ಷ ಪಣತ್ತೂರು ವೆಂಕಟಸ್ವಾಮಿರೆಡ್ಡಿ, ಮುಖಂಡರಾದ ಶೇಖರರೆಡ್ಡಿ, ರವಿಶಂಕರರೆಡ್ಡಿ ಹಾಜರಿದ್ದರು   

ವೈಟ್‌ಫೀಲ್ಡ್‌: ‘ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಡತಿ ಮತ್ತು ಹಾಲನಾಯಕನಹಳ್ಳಿ ಗ್ರಾಮ ಪಂಚಾಯ್ತಿಗಳನ್ನು ಪಟ್ಟಣ ಪಂಚಾಯ್ತಿಗಳನ್ನಾಗಿ ಮೇಲ್ದರ್ಜೆಗೆ ಏರಿಸುವ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ’ ಎಂದು ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.

ಸೋಮವಾರ ಇಲ್ಲಿಗೆ ಸಮೀಪದ ಸರ್ಜಾಪುರ ರಸ್ತೆಯ ಹಾಲನಾಯಕನ ಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೋದಂಡರಾಮ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

‘ಕ್ಷೇತ್ರದ ಬಿದರಹಳ್ಳಿ ಹೋಬಳಿ ವ್ಯಾಪ್ತಿಯನ್ನು ನಗರ ಸಭೆಯನ್ನಾಗಿ ಮಾಡುವಂತೆ ಮನವಿ ಸಲ್ಲಿಸಲಾಗಿದೆ’ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.