ಯಲಹಂಕ: ‘ಹೊರದೇಶಗಳ ಉತ್ಪನ್ನಗಳ ಜೊತೆಗೆ ಪೈಪೋಟಿ ನಡೆಸುವ ರೀತಿಯಲ್ಲಿ ನಮ್ಮ ಕೌಶಲವನ್ನು ಅಭಿವೃದ್ಧಿ ಪಡಿಸಿಕೊಳ್ಳುವವರೆಗೆ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದನೆ ನಿರೀಕ್ಷಿಸಲು ಸಾಧ್ಯವಿಲ್ಲ’ ಎಂದು ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಇಲ್ಲಿನ ರೈಲುಗಾಲಿ ಕಾರ್ಖಾನೆಗೆ ಗುಣಮಟ್ಟ ಮತ್ತು ಉತ್ಪಾದನೆಯಲ್ಲಿ ನಿರಂತರ ಸುಸ್ಥಿರತೆಗೆ ಎರಡು ಅಂತರರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿರುವ ಹಿನ್ನೆಲೆಯಲ್ಲಿ ಸೋಮವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಾರ್ಖಾನೆಯ ಮುಖ್ಯ ಯಾತ್ರಿಕ ಅಧಿಕಾರಿ ಎಚ್.ಕೆ.ಕಾಲ, ಮುಖ್ಯ ಲೆಕ್ಕಾಧಿಕಾರಿ ಸುಬ್ರಹ್ಮಣ್ಯಂ, ಸಿಬ್ಬಂದಿ ಪರಿಷತ್ತಿನ ಜಂಟಿಕಾರ್ಯದರ್ಶಿ ರವೀಂದ್ರನಾಥ್ ಉಪಸ್ಥಿತರಿದ್ದರು.
‘ವರದಿ ನಂತರ ಕ್ರಮ’
‘ಆಂಧ್ರಪ್ರದೇಶದಲ್ಲಿ ಈಚೆಗೆ ನಡೆದ ರೈಲು ದುರಂತದ ಬಗ್ಗೆ ವರದಿ ನೀಡಲು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಪರಿಶೀಲಿಸಿದ ಬಳಿಕ ಸೂಕ್ತಕ್ರಮ ಕೈಗೊಳ್ಳಲಾಗುವುದು’ ಎಂದು ಸಚಿವ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಇದದಲ್ಲಿ ಯಾವುದೇ ರಾಜಿಯಿಲ್ಲ. ಸಿಬ್ಬಂದಿಯ ಬಹುತೇಕ ಬೇಡಿಕೆಗಳನ್ನು ಈಡೇರಿಸಲಾಗಿದೆ. 79 ದಿನಗಳ ಬೋನಸ್ ನೀಡಲಾಗಿದೆ. ಡಿ ಗ್ರೂಪ್ ಸಿಬ್ಬಂದಿ ವರ್ಗದವರು ಮೃತಪಟ್ಟಲ್ಲಿ ಮಕ್ಕಳಿಗೆ ಪರೀಕ್ಷೆ ನಡೆಸದೆ ಉದ್ಯೋಗ ನೀಡಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.