ADVERTISEMENT

ಗಡುವಿಗೂ ಮುನ್ನವೇ ಪರಪ್ಪನ ಅಗ್ರಹಾರಕ್ಕೆ ಮರಳಿದ ಶಶಿಕಲಾ

ಪತಿಯ ಅಂತ್ಯಸಂಸ್ಕಾರಕ್ಕೆ ಹೋಗಿದ್ದ ಎಐಎಡಿಎಂಕೆ ನಾಯಕಿ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2018, 19:30 IST
Last Updated 31 ಮಾರ್ಚ್ 2018, 19:30 IST
ಶಶಿಕಲಾ
ಶಶಿಕಲಾ   

ಬೆಂಗಳೂರು: ಬಹುಅಂಗಾಂಗ ವೈಫಲ್ಯದಿಂದ ಮೃತಪಟ್ಟ ಪತಿ ನಟರಾಜನ್ ಅಂತ್ಯಸಂಸ್ಕಾರಕ್ಕೆ ಹೋಗಿದ್ದ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ, ಪೆರೋಲ್ ಅವಧಿ ಮುಗಿಯಲು ಮೂರು ದಿನ ಬಾಕಿ ಇರುವಂತೆಯೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ವಾಪಸಾಗಿದ್ದಾರೆ.

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಸಜಾಬಂದಿಯಾಗಿರುವ ಶಶಿಕಲಾ, ಪತಿಯ ಅಂತ್ಯಸಂಸ್ಕಾರಕ್ಕೆಂದು 15 ದಿನಗಳ (ಮಾರ್ಚ್‌ 20ರಿಂದ ಏ. 3ರವರೆಗೆ) ತುರ್ತು ಪೆರೋಲ್ ಪಡೆದು
ಕೊಂಡಿದ್ದರು. ಶನಿವಾರ ಬೆಳಿಗ್ಗೆ 9 ಗಂಟೆಗೆ ನಿವಾಸದಿಂದ ಹೊರಟಿದ್ದ ಶಶಿಕಲಾ, ಸಂಜೆ 5 ಗಂಟೆಗೆ ಜೈಲಿಗೆ ಬಂದು ಸೇರಿದರು. 

‘ತಮಿಳುನಾಡಿನ ತಂಜಾವೂರು ಜಿಲ್ಲೆಯ ಪರಿಶುತ್ತಮ್‌ನಗರದ ಮನೆಯಲ್ಲಿ ವಾಸವಿರಬೇಕು. ಮಾಧ್ಯಮಕ್ಕೆ ಸಂದರ್ಶನ ನೀಡಬಾರದು ಹಾಗೂ ರಾಜಕೀಯ ಪ್ರಚಾರ ಮಾಡಬಾರದು ಎಂಬ ಷರತ್ತುಗಳನ್ನು ಪೆರೋಲ್‌ಗೆ ವಿಧಿಸಿದ್ದೆವು. ಅವುಗಳನ್ನು ಶಶಿಕಲಾ ಪಾಲಿಸಿದ್ದಾರೆ’ ಎಂದು ಕಾರಾಗೃಹದ ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.