ಬೆಂಗಳೂರು: ರಾಜಗೋಪಾಲನಗರದಲ್ಲಿ ಗಾರ್ಮೆಂಟ್ಸ್ ಕಾರ್ಮಿಕ ಅರುಣ್ ಕುಮಾರ್ (33) ಎಂಬುವರು ಸೋಮವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಸವನಕಟ್ಟೆಯ ಕಸ್ತೂರಿ ಬಡಾವಣೆಯಲ್ಲಿ ಪತ್ನಿ ಪವಿತ್ರಾ ಜತೆಗೆ ವಾಸವಿದ್ದರು. ಶನಿವಾರವಷ್ಟೇ ಪತ್ನಿಯನ್ನು ತವರಿಗೆ ಕಳುಹಿಸಿದ್ದ ಅರುಣ್ ಮನೆಯಲ್ಲಿ ಒಬ್ಬರೇ ಇದ್ದರು. ಫ್ಯಾನಿಗೆ ಸೀರೆಯಿಂದ ನೇಣು ಹಾಕಿಕೊಂಡಿದ್ದಾರೆ. ಪತ್ನಿ ಮನೆಗೆ ಬಂದು ನೋಡಿದಾಗ ವಿಷಯ ಗೊತ್ತಾಗಿದೆ. ಬಳಿಕ ಠಾಣೆಗೆ ದೂರು ಕೊಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.