ADVERTISEMENT

ಗುತ್ತಿಗೆದಾರನ ಮನೆಯಲ್ಲಿ ಕಳವು

​ಪ್ರಜಾವಾಣಿ ವಾರ್ತೆ
Published 8 ಜನವರಿ 2014, 20:15 IST
Last Updated 8 ಜನವರಿ 2014, 20:15 IST

ಬೆಂಗಳೂರು: ಮಲ್ಲೇಶ್ವರ ಒಂಬತ್ತನೇ ಅಡ್ಡರಸ್ತೆ ನಿವಾಸಿ ಎಂ.ಎ.ಕುಮಾರ್‌ ಎಂಬುವರ ಮನೆಯಲ್ಲಿ ದುಷ್ಕರ್ಮಿಗಳು ಮಂಗಳವಾರ ಸುಮಾರು ಅರ್ಧ ಕೆ.ಜಿ ಚಿನ್ನಾಭರಣ ಮತ್ತು ವಜ್ರದ ಆಭರಣ­ಗಳನ್ನು ಕಳವು ಮಾಡಿದ್ದಾರೆ.

ಸಿವಿಲ್‌ ಗುತ್ತಿಗೆದಾರ ಕುಮಾರ್‌ ಅವರು ಮನೆಗೆ ಸಂಜೆ ಬೀಗ ಹಾಕಿ-­ಕೊಂಡು ಕುಟುಂಬ ಸದಸ್ಯ­ರೊಂದಿಗೆ ವಿ.ವಿ.ಪುರದಲ್ಲಿನ ಸಂಬಂಧಿ­ಕರ ಮನೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ.

ಮನೆಯ ಹಿಂಬಾಗಿಲ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಅಲ್ಮೇರಾದಲ್ಲಿದ್ದ ಆಭರಣಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ.

ಕುಮಾರ್‌ ಮತ್ತು ಕುಟುಂಬ ಸದಸ್ಯರು ರಾತ್ರಿ ಮನೆಗೆ ಹಿಂದಿರುಗಿದಾಗ ಕಳವು ನಡೆದಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 538 ಗ್ರಾಂ ಚಿನ್ನಾಭರಣ, ವಜ್ರದ ಸರ ಮತ್ತು ಓಲೆಗಳು ಕಳವಾಗಿವೆ. ಅವುಗಳ ಮೌಲ್ಯ ಸುಮಾರು ₨ 25 ಲಕ್ಷ ಎಂದು ಪೊಲೀಸರು ಹೇಳಿದ್ದಾರೆ. ಮಲ್ಲೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.