ಬೆಂಗಳೂರು: ಗೋವುಗಳ ಕಳ್ಳ ಸಾಗಣೆ ಪ್ರಕರಣ ಸಂಬಂಧ ತಲಘಟ್ಟಪುರ ಪೊಲೀಸರು ಏಳು ಮಂದಿ ಆರೋಪಿಗಳನ್ನು ಸೋಮವಾರ ಬಂಧಿಸಿದ್ದಾರೆ.
ಆವಲಹಳ್ಳಿ ಮುಖ್ಯರಸ್ತೆಯಲ್ಲಿ ಶನಿವಾರ ರಾತ್ರಿ 9 ಗಂಟೆಯ ಸುಮಾರಿಗೆ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಬಗ್ಗೆ ನಂದಿನಿ ಪೊಲೀಸರಿಗೆ ದೂರು ನೀಡಿದ್ದರು. ಇದೇ ಕಾರಣಕ್ಕೆ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಅವರು ಆರೋಪಿಸಿದ್ದರು.
ಅರ್ಶಾಫ್(33), ಜಾವೇದ್ ಪಾಷಾ (35) ಸಮೀರ್ (32) ಶೇಖ್ ಅಹ್ಮದ್ (25), ಮೌಲಾ (33), ಫೈಜಾ ಖಾನ್ (50), ರಜಾಕ್ (37) ಬಂಧಿಸಲಾಗಿದೆ. ದೂರು ದಾಖಲಾದ ಬಳಿಕ ಸ್ಥಳಕ್ಕೆ ಹೋಗಿ, ಅಲ್ಲಿದ್ದ ಗೋವುಗಳನ್ನು ರಕ್ಷಿಸಿದ್ದೇವೆ. ನಮ್ಮ ಕಾರ್ಯಾಚರಣೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ಸ್ಥಳಕ್ಕೆ ಹೋಗಿ ನಂದಿನಿ ಅವರು ಪರಿಶೀಲಿಸುವ ಅಗತ್ಯವಿರಲಿಲ್ಲ ಎಂದು ತಲಘಟ್ಟಪುರ ಪೊಲೀಸರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.