ಬೆಂಗಳೂರು: ಕೇಂದ್ರ ಸರ್ಕಾರವು ಆಟೊ ಗ್ಯಾಸ್ ಹಾಗೂ ಸಬ್ಸಿಡಿ ರಹಿತ ಅಡುಗೆ ಅನಿಲದ ದರ ಹೆಚ್ಚಿಸಿರುವುದು ಜನವಿರೋಧಿ ನಿರ್ಧಾರ ಎಂದು ಜೆಡಿಎಸ್ ಮುಖಂಡ ಪಿ.ಜಿ.ಆರ್.ಸಿಂಧ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಟೊ ಚಾಲಕ ವೃತ್ತಿಯ ಮೇಲೆ ಅವಲಂಬಿತಾಗಿರುವ ಸಾವಿರಾರು ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಮಧ್ಯಮವರ್ಗದ ಕುಟುಂಬಗಳು ಬೀದಿ ಪಾಲಾಗುತ್ತವೆ. ಅಲ್ಲದೇ ಸಾರ್ವಜನಿಕರಿಗೂ ಹೊರೆಯಾಗುತ್ತದೆ. ಎಂದು ತಿಳಿಸಿದ್ದಾರೆ. ಅವೈಜ್ಞಾನಿಕ ದರವನ್ನು ಹಿಂಪಡೆದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.