ADVERTISEMENT

ಚನ್ನಪಟ್ಟಣದಿಂದ ಸ್ಪರ್ಧೆ: ಅನಿತಾ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 5 ಜುಲೈ 2017, 20:34 IST
Last Updated 5 ಜುಲೈ 2017, 20:34 IST
ಚನ್ನಪಟ್ಟಣದಿಂದ ಸ್ಪರ್ಧೆ:  ಅನಿತಾ ಕುಮಾರಸ್ವಾಮಿ
ಚನ್ನಪಟ್ಟಣದಿಂದ ಸ್ಪರ್ಧೆ: ಅನಿತಾ ಕುಮಾರಸ್ವಾಮಿ   

ಚನ್ನಪಟ್ಟಣ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ  ಸ್ಪರ್ಧಿಸುವುದಾಗಿ  ಎಂದು  ಜೆಡಿಎಸ್‌ ನಾಯಕಿ ಅನಿತಾ ಕುಮಾರಸ್ವಾಮಿ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ಆಯೋಜಿಸಿದ್ದ ಜೆಡಿಎಸ್ ಅಲ್ಪಸಂಖ್ಯಾಂತರ ಘಟಕದ ಪದಾಧಿಕಾರಿಗಳ ನೇಮಕ ಮತ್ತು ಕಾಂಗ್ರೆಸ್ ಮುಖಂಡರು, ಯುವಕರ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕ್ಷೇತ್ರದಿಂದ ಸ್ಪರ್ಧಿಸುವಂತೆ ಇಲ್ಲಿನ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ಅವರ ಆಶಯದಂತೆ ಇಲ್ಲಿ ಸ್ಪರ್ಧಿಸಿ  ಅಭಿವೃದ್ಧಿಗೆ ಶ್ರಮಿಸುವ ತೀರ್ಮಾನ ಮಾಡಿದ್ದೇನೆ’ ಎಂದರು.

ADVERTISEMENT

ರಾಜ್ಯದಲ್ಲಿ ಜೆಡಿಎಸ್ ಅಧಿಕಾರ ಹಿಡಿಯುವುದು ಖಚಿತ. ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಗಳಾಗಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಲು ಪಣತೊಟ್ಟಿದ್ದಾರೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.