ADVERTISEMENT

ಚಿಕಿತ್ಸೆ ಫಲಿಸದೆ ಅಪಘಾತಕ್ಕೀಡಾದ ಮಹಿಳೆ ಸಾವು: ಚಾಲಕ ಬಂಧನ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2017, 19:30 IST
Last Updated 17 ಅಕ್ಟೋಬರ್ 2017, 19:30 IST

ಬೆಂಗಳೂರು: ಟ್ರೀನಿಟಿ ಚರ್ಚ್‌ ಬಳಿಯ ಸ್ವಾಮಿ ವಿವೇಕಾನಂದ ರಸ್ತೆಯಲ್ಲಿ ಸೋಮವಾರ ಅಪಘಾತಗೊಂಡು ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ರೇಬೆಕ್ ದೇವಾಸ್ (53) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಹಲಸೂರು ಬಳಿಯ ಜೋಗುಪಾಳ್ಯದ ನಿವಾಸಿಯಾಗಿದ್ದ ರೇಬೆಕ್ ಅವರು ಟ್ರೀನಿಟಿ ಚರ್ಚ್‌ನಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡುತ್ತಿದ್ದರು.

ಕೆಲಸ ಮುಗಿಸಿ ರಾತ್ರಿ 9.30ರ ಸುಮಾರಿಗೆ ರಸ್ತೆಯ ಮೂಲಕ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಆಗ ಹಿಂದೆಯಿಂದ ವೇಗವಾಗಿ ಬಂದ ಆಟೊ ಅವರಿಗೆ ಗುದ್ದಿದೆ. ಕೆಳಗೆ ಬಿದ್ದಿದ್ದರಿಂದ ಅವರ ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾಗಿತ್ತು. ಸ್ಥಳದಲ್ಲಿದ್ದವರು ಗಾಯಾಳುವನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದರು.

ADVERTISEMENT

ಆಟೊ ಜಪ್ತಿ ಮಾಡಿದ್ದು, ಚಾಲಕ ಆಲ್ತಾಫ್ (24) ಅವರನ್ನು ಬಂಧಿಸಿದ್ದೇವೆ. ನಿರ್ಲಕ್ಷ್ಯದಿಂದ ವಾಹನ ಚಾಲನೆ ಮಾಡಿದ ಆರೋಪದಡಿ ಪ್ರಕರಣ ದಾಖಲಿದ್ದೇವೆ ಎಂದು ಹಲಸೂರು ಸಂಚಾರ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.