ಬೆಂಗಳೂರು: ಯೂತ್ ಫಾರ್ ಸೇವಾ ಸಂಸ್ಥೆಯ ‘ಚಿಗುರು’ ಕಾರ್ಯಕ್ರಮವು ಹತ್ತು ವರ್ಷ ಪೂರೈಸಿದ ಪ್ರಯುಕ್ತ ನಗರದಲ್ಲಿ ಭಾನುವಾರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ನಗರದ 70 ಶಾಲೆಗಳ ಹಾಗೂ ಅನಾಥಾಶ್ರಮಗಳ 2,000 ವಿದ್ಯಾರ್ಥಿಗಳು ನೃತ್ಯ, ರಸಪ್ರಶ್ನೆ, ಸಮೂಹಗಾಯನ, ಯೋಗ, ರಂಗೋಲಿ ಹಾಗೂ ಏಕಪಾತ್ರಾಭಿನಯ ಸ್ಪರ್ಧೆಗಳಲ್ಲಿ ಭಾಗಿಯಾಗಿದ್ದರು.
ಡೆಲ್ ಕಂಪೆನಿಯ ಅಧ್ಯಕ್ಷ ಅಲೋಕ್ ಓರಿಯಾ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಐಟಿ ಕಂಪನಿಗಳ ಉದ್ಯೋಗಿಗಳು ಸ್ವಯಂಸೇವಕರಾಗಿ ಪಾಲ್ಗೊಂಡರು.
ಮಕ್ಕಳಲ್ಲಿ ಅಡಗಿರುವ ಅಂತರ್ಗತ ಕಲೆಯನ್ನು ಒರೆಗಚ್ಚಿ, ಅವರ ಆತ್ಮವಿಶ್ವಾಸ ವೃದ್ಧಿಸಲು ನೆರವಾಗುವ ಇಂತಹ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು ಎಂದು ಯೂತ್ ಫಾರ್ ಸೇವಾ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಡಿ.ಎಂ.ಕಿರಣ್ ಹೇಳಿದರು.
ಮಕ್ಕಳ ಸಮಗ್ರ ಅಭಿವೃದ್ಧಿಗೆ ಅನುಕೂಲವಾಗಲೆಂದು ಹತ್ತು ವರ್ಷಗಳಿಂದ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬಂದಿದ್ದೇವೆ. ಪ್ರತಿ ವರ್ಷ 25,000 ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಬೆಂಗಳೂರು, ಮೈಸೂರು, ಶಿರಸಿ, ಹುಬ್ಬಳ್ಳಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಕಾರ್ಯಕ್ರಮ ನಡೆಯುತ್ತಿವೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.