ADVERTISEMENT

ಚುನಾವಣಾ ಆಯೋಗಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 4 ಜೂನ್ 2013, 19:59 IST
Last Updated 4 ಜೂನ್ 2013, 19:59 IST

ಬೆಂಗಳೂರು: `ಕರ್ನಾಟಕ ಜನತಾ ಪಕ್ಷದ (ಕೆಜೆಪಿ) ಸಂಸ್ಥಾಪಕ ಅಧ್ಯಕ್ಷ ಪದ್ಮನಾಭ ಪ್ರಸನ್ನ ಕುಮಾರ್ ಅವರು ಸುಳ್ಳು ದಾಖಲೆಗಳನ್ನು ನೀಡಿ ಪಕ್ಷವನ್ನು ನೋಂದಾಯಿಸಿದ್ದಾರೆ. ಈ ಕುರಿತು ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು' ಎಂದು ಕೋರಿ ಹೊಟ್ಟೆ ಪಕ್ಷದ ರಂಗಸ್ವಾಮಿ ಪುತ್ರ ಜಿ.ಆರ್. ರಾಜೇಂದ್ರ ಪ್ರಸಾದ್ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ.

ರಾಜೇಂದ್ರ ಪ್ರಸಾದ್ ಅವರು ಇದೇ ವಿಚಾರವಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. `ಸುಳ್ಳು ದಾಖಲೆ ನೀಡಿ ಪದ್ಮನಾಭ ಪ್ರಸನ್ನ ಅವರು ಸ್ಥಾಪಿಸಿರುವ ಕೆಜೆಪಿಯ ಮಾನ್ಯತೆ ರದ್ದು ಮಾಡಬೇಕು' ಎಂದು ಅವರು ಹೈಕೋರ್ಟ್‌ನಲ್ಲಿ ಕೋರಿದ್ದರು.

ಇದರ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ, ದೂರನ್ನು ಚುನಾವಣಾ ಆಯೋಗಕ್ಕೆ ನೀಡಬೇಕು, ಆಯೋಗವೇ ಇದನ್ನು ಇತ್ಯರ್ಥಪಡಿಸಲಿ ಎಂದು ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.