ADVERTISEMENT

ಚೂರಿ ತಂದ ನಾರಿಗೆ ನ್ಯಾಯಾಂಗ ಬಂಧನ

​ಪ್ರಜಾವಾಣಿ ವಾರ್ತೆ
Published 4 ಮೇ 2018, 20:45 IST
Last Updated 4 ಮೇ 2018, 20:45 IST

ಬೆಂಗಳೂರು: ಚಾಕು ಬಚ್ಚಿಟ್ಟುಕೊಂಡು ಲೋಕಾಯುಕ್ತ ಕಚೇರಿಗೆ ಬಂದಿದ್ದ ವಿಜಯನಗರ ಹೊಸಳ್ಳಿಯ ಸೋನು (57) ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಐಪಿಸಿ ಕಲಂ 452 (ಅತಿಕ್ರಮ ಪ್ರವೇಶ) ಹಾಗೂ 353ರ(ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ )ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೋನು ಅವರನ್ನು ಪೊಲೀಸರು 8ನೇ ಎಸಿಎಮ್‌ಎಮ್‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಗುರುವಾರ ಘಟನೆಯ ಬಳಿಕ ಪೊಲೀಸರ ಪ್ರಶ್ನೆಗಳಿಗೆ ಅಸಂಬದ್ಧವಾಗಿ ಉತ್ತರ ನೀಡಿದ ಮಹಿಳೆ  ‘ನಾನು ವಿಜಯನಗರದ ನಿವಾಸಿ, ರಾಜೀವ್‌ ಗಾಂಧಿ ನನ್ನ ಪತಿ’ ಎಂದು ಹೇಳಿದ್ದಳು. ಹೀಗಾಗಿ ಆಕೆ ಮಾನಸಿಕ ಅಸ್ವಸ್ಥೆ ಇರಬಹುದು ಎಂದು ಶಂಕಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.